ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕೋಟಿ ವೆಚ್ಚದಲ್ಲಿ 5 ಚೆಕ್ ಡ್ಯಾಂಗಳ ನಿರ್ಮಾಣ

| Published : Dec 03 2024, 12:33 AM IST / Updated: Dec 03 2024, 01:10 PM IST

ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕೋಟಿ ವೆಚ್ಚದಲ್ಲಿ 5 ಚೆಕ್ ಡ್ಯಾಂಗಳ ನಿರ್ಮಾಣ
Share this Article
  • FB
  • TW
  • Linkdin
  • Email

ಸಾರಾಂಶ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 5 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೋಮವಾರ ಕೆ.ಎಚ್.ಮುನಿಯಪ್ಪ ಗುದ್ದಲಿಪೂಜೆ ನೆರವೇರಿಸಿದರು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 5 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೋಮವಾರ ಕೆ.ಎಚ್.ಮುನಿಯಪ್ಪ ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಾಳಿಗೆಹಳ್ಳಿ - ಅತ್ತಿಬೆಲೆ ಬಳಿ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು, ಒಟ್ಟು 5 ಚೆಕ್ ಡ್ಯಾಂಗಳನ್ನು ಮಾಳಿಗೆಹಳ್ಳಿ, ಮಾಯಸಂದ್ರ, ವೆಂಕಟನಹಳ್ಳಿ, ಬೆಟ್ಟಕೋಟೆ, ವಿಜಯಪುರ ಗ್ರಾಮಗಳ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಸುತ್ತ-ಮುತ್ತಲಿನ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

₹2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚೆಕ್ ಡ್ಯಾಂಗಳ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದರೊಂದಿಗೆ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಬಿದಲೂರು ಗ್ರಾಪಂ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಮುನಿರಾಜು, ಆವತಿ ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

2ಕೆಡಿಬಿಪಿ2- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2 ಕೋಟಿ ವೆಚ್ಚದ 5 ಚೆಕ್‌ ಡ್ಯಾಂಗಳ ನಿರ್ಮಾಣಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಗುದ್ದಲಿಪೂಜೆ ನೆರವೇರಿಸಿದರು.