50 ಲಕ್ಷ ರು ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ

| Published : Oct 12 2025, 01:00 AM IST

50 ಲಕ್ಷ ರು ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಆನೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗಂಗಾಧರ ನಗರದ ಎಸ್ ಸಿ ಕಾಲೋನಿಯಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ತಾಲೂಕಿನ ಆನೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗಂಗಾಧರ ನಗರದ ಎಸ್ ಸಿ ಕಾಲೋನಿಯಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.

ಹಲವಾರು ವರ್ಷಗಳಿಂದ ಈ ಗಂಗಾಧರ ನಗರಕ್ಕೆ ಮೂಲಭೂತ ಸೌಲಭ್ಯದ ಕೊರತೆ ಇತ್ತು. ಇದನ್ನು ಗಮನಿಸಿ ಕೆ ಆರ್ ಐ ಡಿ ಎಲ್ ನ ಭೂ ಸೇನಾ ಅಭಿವೃದ್ಧಿ ನಿಗಮದ ವತಿಯಿಂದ ಸುಮಾರು 50 ಲಕ್ಷ ರು. ಗಳ ಅನುದಾನವನ್ನು ತಂದು ಈ ನಗರವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. ಈ ವೇಳೆ ಆನೇಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಭವ್ಯ, ಸದಸ್ಯರಾದ ಶ್ರೀನಿವಾಸ್, ರಾಮಕೃಷ್ಣ, ರಾಜಶೇಖರ್, ಬಸವರಾಜು, ಮುಖಂಡರಾದ ಹೊಸಳ್ಳಿ ದೇವರಾಜು, ತ್ಯಾಗರಾಜು, ಸೋಮೇನಹಳ್ಳಿ ಶಿವಾನಂದ್, ಮಲ್ಲಾಘಟ್ಟ ಆನಂದ್, ದೊಡ್ಡಾಘಟ್ಟ ದಯಾನಂದ್, ಭೂ ಸೇನಾ ಅಭಿವೃದ್ಧಿ ನಿಗಮದ ಜೂನಿಯರ್ ಇಂಜಿನಿಯರ್ ಗಿರೀಶ್ ಸೇರಿದಂತೆ ಹಲವು ಮುಖಂಡರು ಇದ್ದರು.