ಸ್ಥಳೀಯವಾಗಿ ಉದ್ಯೋಗ ಒದಗಿಸಿ ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜತೆಯಾಗಿ ನಿಂತಿರುವ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು‌

ಕುಷ್ಟಗಿ: ಮಹಾತ್ಮ ಗಾಂಧಿ ನರೇಗಾ ಯೋಜನೆಯಂತೆ ವಿಬಿಜಿ ರಾಮ್ ಜಿ ಕೂಡ ಅಕುಶಲ ಕೂಲಿಕಾರರಿಗೆ ನಿರಂತರ ಕೆಲಸ ಇರುವುದರಿಂದ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಾಪಂ ಇಒ ಅಮರೇಶ್ ಹೇಳಿದರು.

ತಾಲೂಕಿನ ಚಳಗೇರಾ ಹಾಗೂ ಹನುಮನಾಳ ಗ್ರಾಪಂ ವ್ಯಾಪ್ತಿಯ ನರೇಗಾ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರೀಶಿಲಿಸಿ ಕೂಲಿಕಾರರೊಂದಿಗೆ ಮಾತನಾಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ನಿರಂತರ ಕೆಲಸ ದೊರೆಯಲಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದರು.

ನರೇಗಾ ಯೋಜನೆಯಡಿ ಸರಿಯಾಗಿ ಕೆಲಸ ನಿರ್ವಹಿಸಿ ವೇತನ ಪಡೆಯಬಹುದು. ಕೆಲಸದ ವಿಷಯದಲ್ಲಿ ಯಾವುದೇ ಅಡೆತಡೆ ಇರುವುದಿಲ್ಲ ಎಂದು ತಿಳಿಸಿದ ಅವರು, ಗ್ರಾಮೀಣ ಪ್ರದೇಶದ ಅಕುಶಲ ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಿ ದೀರ್ಘ ಕಾಲ ಬಾಳಿಕೆ ಬರುವ ಸಮುದಾಯ ಸ್ವತ್ತು ನಿರ್ಮಿಸಲು ಅವಕಾಶ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜತೆಯಾಗಿ ನಿಂತಿರುವ ಉದ್ಯೋಗ ಖಾತ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು‌ ಎಂದು ಸಲಹೆ ನೀಡಿದರು.

ಚಳಗೇರಾ ಗ್ರಾಪಂ ವ್ಯಾಪ್ತಿಯ ಎಸ್‌ಡಬ್ಲ್ಯೂಎಂ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹನುಮನಾಳ ಗ್ರಾಪಂಗೆ ಭೇಟಿ ನೀಡಿ ವಿವಿಧ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ವಿವಿಧ ಯೋಜನೆ ಕುರಿತು ಮಾಹಿತಿ ಪಡೆದು ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಪಂ ನರೇಗಾ ಸಹಾಯಕ ನಿರ್ದೇಶಕ ನಿಂಗನಗೌಡ ವಿ.ಎಚ್, ಕಾರ್ಯಕ್ರಮ ವ್ಯವಸ್ಥಾಪಕ ರವಿಗೌಡರ್,‌ ಪಿಡಿಒ ಶಂಕರ್, ಪ್ರಶಾಂತ ಹಿರೇಮಠ, ತಾಲೂಕು ಐಇಸಿ ಸಂಯೋಜಕ ಚಂದ್ರಶೇಖರ ಜಿ, ತಾಂತ್ರಿಕ ಸಂಯೋಜಕ ಬಸವರಾಜ್ ಕೆ, ತಾಂತ್ರಿಕ ಸಹಾಯಕರು, ಗ್ರಾಪಂ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.