ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ, ರಾಷ್ಟ್ರವಿರೋಧಿ ಸಂಚು: ಗೀತಾಂಜಲಿ ಸುವರ್ಣ

| Published : Sep 06 2024, 01:00 AM IST

ಪ್ರೀತಿಯ ಹೆಸರಲ್ಲಿ ಮತಾಂತರ ಯತ್ನ, ರಾಷ್ಟ್ರವಿರೋಧಿ ಸಂಚು: ಗೀತಾಂಜಲಿ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಪ್ರೀತಿಯ ಹೆಸರಿನಲ್ಲಿ ಮತಾಂತರ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ದಳದ ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರವುದಕ್ಕೆ ಸಾಧ್ಯವಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮಣಿಪಾಲದ ವೈದ್ಯಕೀಯ ಕಾಲೇಜಿನಲ್ಲಿ ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಯತ್ನಿಸಿದ ಪ್ರಕರಣ ಖಂಡನೀಯ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ತಿಳಿಸಿದ್ದಾರೆ.ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿ ಇಸ್ಲಾಮಿಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಈ ಪ್ರಕರಣವನ್ನು ತಕ್ಷಣ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.)ಗೆ ವಹಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹೊರ ರಾಜ್ಯದ ಹಿಂದೂ ವಿದ್ಯಾರ್ಥಿನಿಗೆ, ಅದೇ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ವೈದ್ಯ ಮಹಮ್ಮದ್ ಡ್ಯಾನಿಶ್ ಖಾನ್, ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡಿದ್ದಾನೆ ಎಂದು ಯುವತಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರ ಕೃತ್ಯ ಶ್ಲಾಘನೀಯ.ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಪ್ರೀತಿಯ ಹೆಸರಿನಲ್ಲಿ ಮತಾಂತರ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಈ ರೀತಿ ಮತಾಂತರಕ್ಕೆ ಒಳಗಾದ ಹೆಣ್ಣು ಮಕ್ಕಳನ್ನು ರಾಷ್ಟ್ರ ವಿರೋಧಿ ಚಟುವಟಿಕೆಗೆ ಬಳಸಿರುವುದು ಅನೇಕ ಪ್ರಕರಣಗಳಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ಈ ಪ್ರಕರಣದಲ್ಲಿಯೂ ಇದೇ ರೀತಿಯ ಸಂಚು, ರಾಷ್ಟ್ರ ವಿರೋಧಿ ಸಂಘಟನೆಯ ಕೈವಾಡ ಇರುವ ಬಗ್ಗೆ ಅನುಮಾನವಿದೆ. ಆದ್ದರಿಂದ ರಾಷ್ಟ್ರೀಯ ತನಿಖಾ ದಳದ ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರವುದಕ್ಕೆ ಸಾಧ್ಯವಿದೆ ಎಂದವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.