ರಾಜ್ಯ ಸರ್ಕಾರದ ಜನಪರ ಸಾಧನೆ ಜನರಿಗೆ ಮನವರಿಕೆ ಮಾಡಿ: ಡಾ.ಶರಣಪ್ರಕಾಶ ಪಾಟೀಲ್

| Published : Jun 13 2025, 03:06 AM IST

ರಾಜ್ಯ ಸರ್ಕಾರದ ಜನಪರ ಸಾಧನೆ ಜನರಿಗೆ ಮನವರಿಕೆ ಮಾಡಿ: ಡಾ.ಶರಣಪ್ರಕಾಶ ಪಾಟೀಲ್
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಕಾಂಗ್ರೆಸ್ ಪಕ್ಷದ ತತ್ತ್ವ ಸಿದ್ಧಾಂತ ಸಮ ಸಮಾಜ ನಿರ್ಮಾಣ ಹಾಗೂ ಸರ್ವ ಜನಾಂಗದ ಶೋಷಿತರಿಗೆ ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಟಿಬದ್ಧವಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್‌ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಭ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕಾಂಗ್ರೆಸ್ ಪಕ್ಷದ ತತ್ತ್ವ ಸಿದ್ಧಾಂತ ಸಮ ಸಮಾಜ ನಿರ್ಮಾಣ ಹಾಗೂ ಸರ್ವ ಜನಾಂಗದ ಶೋಷಿತರಿಗೆ ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಟಿಬದ್ಧವಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್‌ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ರಾಜ್ಯ ಸರ್ಕಾರ ಜನಪರ, ಜನಹಿತ ಆಡಳಿತ ನಡೆಸುತ್ತಿದೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಸರ್ಕಾರದ ಸಾಧನೆ ಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ವಿರೋಧ ಪಕ್ಷಗಳ ಆರೋಪಕ್ಕೆ ಉತ್ತರ ನೀಡಬೇಕೆಂದು ತಿಳಿಸಿದರು.

ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಪದೇ ಪದೇ ಟೀಕೆ ಮಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ಗ್ಯಾರಂಟಿ ಯೋಜನೆಗಳು ಅನುಷ್ಠಾನವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು, ಆದರೆ, ಸರ್ಕಾರ ಇದನ್ನೂ ಮೀರಿ ಯಶಸ್ವಿಯಾಗಿ 2 ವರ್ಷ ಪೂರೈಸಿದೆ ಎಂದು ಹೇಳಿದರು.ವೈದ್ಯಕೀಯ ಇಲಾಖೆಯಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪ್ರಗತಿ ಸಾಧಿಸಿದ್ದೇವೆ. ಮೆಡಿಕಲ್‌ ಕಾಲೇಜು, ಜಿಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಉತ್ತಮ ಚಿಕಿತ್ಸೆ ಸಾರ್ವಜನಿಕರಿಗೆ ದೊರೆಯಬೇಕೆಂಬುದು ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮೆಡಿಕಲ್‌ ಕಾಲೇಜು ಕಾಮಗಾರಿ ಪೂರ್ಣಗೊಂಡಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಯನ್ನು ಮುಂದಿನ 8 ತಿಂಗಳ ಒಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಇದು ಲೋಕಾರ್ಪಣೆಯಾದರೆ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದರು.ಜನಹಿತ, ಜನಪರವಾಗಿ ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾಗಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಆದರೆ, ಇದನ್ನು ಸಹಿಸದ ವಿರೋಧ ಪಕ್ಷಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಹೇಳಿಕೆ ನೀಡುತ್ತಿವೆ ಎಂದು ಹೇಳಿದರು.

ಸಮಾಜದಲ್ಲಿರುವ ದುರ್ಬಲರಿಗೆ ಶಕ್ತಿ ತುಂಬುವ ಕೆಲಸವನ್ನು ರಾಜ್ಯ ಸರ್ಕಾರ ನಿರಂತರವಾಗಿ ಮಾಡುತ್ತಿದೆ. ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ 5 ಶಾಸಕರು ಗೆಲ್ಲುವ ಮೂಲಕ ಕಲ್ಯಾಣ ಕರ್ನಾಟಕ ದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಗಿದೆ ಎಂದರು.

ಚಿಕ್ಕಮಗಳೂರು, ಶಿವಮೊಗ್ಗ, ಕಾರವಾರ, ಮಂಗಳೂರು, ಉಡುಪಿ ಈ 5 ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷಗಟ್ಟಿಯಾಗಿ ಬೇರೂರ ಬೇಕೆಂಬುದೆ ನಮ್ಮ ಆಶಯವಾಗಿದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಮಾತನಾಡಿ, ರಾಜ್ಯದಲ್ಲಿ ಜನಪರ ಆಡಳಿತವನ್ನು ಯಶಸ್ವಿಯಾಗಿ 2 ವರ್ಷ ಪೂರೈಸಿರುವ ರಾಜ್ಯ ಸರ್ಕಾರ ಭರವಸೆಗಳನ್ನು ಮನೆಗೆ ಮುಟ್ಟಿಸುವಲ್ಲಿ ಸಾಕಾರಗೊಂಡಿದೆ ಎಂದರು.ಮುಂಬರುವ ಗ್ರಾಪಂ, ತಾಪಂ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದ ಅವರು, ಪಕ್ಷಕ್ಕೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಕಾರ್ಯಕರ್ತರು, ಮುಖಂಡರು ಒತ್ತು ನೀಡಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಶಿವಾನಂದಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಡಿ.ಎಲ್‌. ವಿಜಯ್‌ಕುಮಾರ್, ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಸೇವಾದಳದ ಅಧ್ಯಕ್ಷ ಬಸವರಾಜ್, ನಗರ ಕಾಂಗ್ರೆಸ್‌ ಅಧ್ಯಕ್ಷ ತನೂಜ್‌ ಕುಮಾರ್ ನಾಯ್ಡ್, ಮಲ್ಲೇಶ್‌ ಸ್ವಾಮಿ, ಅತೀಕ್‌ಖೈಸರ್ ಉಪಸ್ಥಿತರಿದ್ದರು.12 ಕೆಸಿಕೆಎಂ 1ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್‌ ಅವರನ್ನು ಸನ್ಮಾನಿಸಲಾಯಿತು. ಶಾಸಕ ಎಚ್‌.ಡಿ. ತಮ್ಮಯ್ಯ, ಡಾ. ಅಂಶುಮಂತ್‌, ಡಾ. ಡಿ.ಎಲ್‌. ವಿಜಯಕುಮಾರ್‌ ಇದ್ದರು.