ಸಾವಯವ ಕೃಷಿಯಿಂದ ಆರೋಗ್ಯಕರ ವಾತಾವರಣ ಸೃಷ್ಟಿ: ಡಾ.ರುದ್ರಮುನಿ

| Published : May 21 2024, 12:44 AM IST

ಸಾವಯವ ಕೃಷಿಯಿಂದ ಆರೋಗ್ಯಕರ ವಾತಾವರಣ ಸೃಷ್ಟಿ: ಡಾ.ರುದ್ರಮುನಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕೃಷಿ ಪ್ರಾಯೋಗಿಕ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಡಾ.ರುದ್ರಮುನಿ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ ಜೊತೆಗೆ ದೈಹಿಕ ಮತ್ತು ಮಾನಸಿಕ ನೆಮ್ಮದಿಯನ್ನು ನೀಡುತ್ತದೆ ಎಂದು ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಭಾರತೀಯ ಕೃಷಿ ಅಧ್ಯಯನ ಪರಿಷತ್ತು, ಕೃಷಿ ವಿಜ್ಞಾನ ಕೇಂದ್ರದ ಪ್ರಾಧ್ಯಾಪಕ ಡಾ.ರುದ್ರಮುನಿ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾಭವನದಲ್ಲಿ ದೀವಿಗೆ ಎಜುಕೇಷನ್ ಫೌಂಡೇಷನ್ ಹಾಗೂ ವಿ.ಪಿ. ಅಕಾಡೆಮಿ ವತಿಯಿಂದ ಪಿಯುಸಿ ನಂತರ ಮುಂದೇನು? ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷಾ ತರಬೇತಿಯ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ವಿ.ಪಿ. ಅಕಾಡೆಮಿ ಈಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಬಿಎಸ್ಸಿ ಅಗ್ರಿಕಲ್ಚರ್ ಓದುವ ಮಕ್ಕಳಿಗೆ ಈ ಕಾರ್ಯಾಗಾರವು ಉಪಯುಕ್ತವಾಗಿದೆ. ದೇಶಕ್ಕೆ ಅನ್ನ ಕೊಡುವ ರೈತನ ಬದುಕು ಸತ್ವಪೂರ್ಣವಾದುದು. ಮಕ್ಕಳು ಕೃತಕ ಜೀವನಕ್ಕೆ ಮಾರುಹೋಗದೆ, ಗುಣಮಟ್ಟದ ಕೃಷಿಪದ್ಧತಿಯ ಶಿಕ್ಷಣ ಪಡೆದು ಸಾರ್ಥಕ ಬದುಕನ್ನು ನಡೆಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಇ.ಮಂಜುನಾಥ ಪಿಯುಸಿ ನಂತರ ಮುಂದೇನು? ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷಾ ಪ್ರಾತ್ಯಕ್ಷಿಕೆ ತರಬೇತಿ ನೀಡಿದರು. ದೀವಿಗೆ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಎಂ.ವಿ.ನಟರಾಜ್, ವಿ.ಪಿ.ಅಕಾಡೆಮಿ ಪ್ರಾಚಾರ್ಯ ಹೆಚ್.ದೇವರಾಜ್, ನಿರ್ದೇಶಕ ಎಸ್.ಕೆ.ದೀಪಕ್ ಹಾಗೂ ವೈ.ಜಿ.ರಾಜು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಐಶ್ವರ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು. ರಚನಾ ಸ್ವಾಗತಿಸಿದರು. ಸಂಜನಾ ವಂದಿಸಿದರು. ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡರು.