ಬೆಳೆಹಾನಿ: ಪರಿಹಾರಕ್ಕೆ ಶಾಸಕ ತುನ್ನೂರು ಮನವಿ

| Published : Aug 24 2025, 02:00 AM IST

ಸಾರಾಂಶ

survey, underway, determine, extent damage, crops, sown, farmers, district, including, rice, cotton, crops,

ಕನ್ನಡಪ್ರಭ ವಾರ್ತೆ ಯಾದಗಿರಿ

ವಾಯುಭಾರ ಕುಸಿತದಿಂದಾಗಿ ಒಂದು ವಾರದವರೆಗೂ ಸುರಿದ ಸತತ ಮಳೆಗೆ ಜಿಲ್ಲೆಯ ರೈತರು ಬಿತ್ತಿದ ಹೆಸರು, ತೊಗರಿ ಮತ್ತು ಹತ್ತಿ ಇತರೆ ಬೆಳೆಗಳು ಹಾಳಾಗಿದ್ದು, ಈಗ ಆರಂಭಿಸಲಿರುವ ಸಮೀಕ್ಷೆ ಬೇಗನೆ ಮುಗಿಸಿ ಹಾನಿಗೊಳಗಾದ ರೈತರಿಗೂ ಹಾಗೂ ಮನೆಗಳು ಕುಸಿದು ಸೂರು ಕಳೆದಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶುಕ್ರವಾರ ಅಧಿವೇಶನದಲ್ಲಿ ಮಾತನಾಡಿದ ಅವರು, ಈ ಬೆಳೆಗಳು ರಾಶಿ ಹಂತಕ್ಕೆ ಬಂದಿದ್ದವು, ಇದಕ್ಕೆ ಸಿದ್ದರಾಗಿದ್ದ ರೈತರಿಗೆ ಈ ಮಳೆ ಬರಸಿಡಿಲು ಬಡಿದಂತೆಯೇ ಆಗಿದೆ ಎಂದರು.

ಹೆಸರು ರೈತರ ಮಿತ್ರ ಬೆಳೆ: 40 ದಿನಗಳಲ್ಲಿ ಕೈಸೇರುವ ಇದು ಮಾರಿ ಮುಂದಿನ ಬೆಳೆ ಬಿತ್ತನೆಗೆ ರೈತರು ಸಜ್ಜಾಗುತ್ತಿದ್ದರು. ಆದರೆ ಅವರ ಕನಸು ನುಚ್ಚುನೂರಾಗಿದೆ. ಕಾರಣ ರೈತರು ಉಳಿದರೆ ಎಲ್ಲರೂ ಉಳಿದಂತೇ. ಕಾರಣ ತ್ವರಿತಗತಿಯಲ್ಲಿ ಸಮೀಕ್ಷೆ ನಡೆಸಿ ಪರಿಹಾರ ವಿತರಿಸುವ ಆಗಬೇಕೆಂದು ಶಾಸಕರು ಸಭಾಧ್ಯಕ್ಷರ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಜಿಲ್ಲೆಯ ಆರು ತಾಲೂಕುಗಳಲ್ಲಿ ಮಳೆಯಿಂದ ಮನೆಗಳು ಕುಸಿದಿವೆ. ಇದರಿಂದ ಬಡವರ ಬದುಕು ಬೀದಿಗೆ ಬಂದಿದೆ. ಕಾರಣ, ಸಂಬಂಧಪಟ್ಟ ಅಧಿಕಾರಿಗಳಿಂದ ಇದರ ಸಮೀಕ್ಷೆ ಕೂಡಾ ನಡೆಸಿ ಪರಿಹಾರ ನೀಡಬೇಕೆಂದು ತುನ್ನೂರು ಮನವಿ ಮಾಡಿದ್ದಾರೆ.

-

23ವೈಡಿಆರ್3 : ಬೆಳೆಹಾನಿ ಸಮೀಕ್ಷೆ ನಡೆಸಿ, ಬೇಗನೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ತುನ್ನೂರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ಸರ್ಕಾರದ ಗಮನ ಸೆಳೆದರು.

---000---