ಆಚರಣೆಗಳಿಂದ ಸಂಸ್ಕೃತಿ, ಸಂಪ್ರದಾಯ ಉಳಿವು

| Published : Jan 14 2025, 01:00 AM IST

ಸಾರಾಂಶ

ದೇಶದ ಜನರಲ್ಲಿ ಭಕ್ತಿ ಭಾವನೆ ಉಳಿದಿರುವುದರಿಂದ ಆಧುನಿಕತೆಯ ಎಷ್ಟೇ ಬದಲಾವಣೆಗಳಾದರೂ ಆಚರಣೆಗಳಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ಉಳಿದು ಮುಂದುವರೆದಿವೆ. ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಮಾಡಿದರೆ ಜೀವನದಲ್ಲಿ ಬದಲಾವಣೆ ಆಗುತ್ತದೆ ಎಂದು ಅಲ್ಲಿಗೆ ಹೋಗಿಬಂದ ಅನೇಕರು ಹೇಳಿದ್ದಾರೆ. ಈ ನಂಬಿಕೆಯಿಂದಲೇ ಶಬರಿಮಲೆ ಕ್ಷೇತ್ರ ವಿಶ್ವವಿಖ್ಯಾತವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರುದೇಶದ ಜನರಲ್ಲಿ ಭಕ್ತಿ ಭಾವನೆ ಉಳಿದಿರುವುದರಿಂದ ಆಧುನಿಕತೆಯ ಎಷ್ಟೇ ಬದಲಾವಣೆಗಳಾದರೂ ಆಚರಣೆಗಳಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ಉಳಿದು ಮುಂದುವರೆದಿವೆ. ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಮಾಡಿದರೆ ಜೀವನದಲ್ಲಿ ಬದಲಾವಣೆ ಆಗುತ್ತದೆ ಎಂದು ಅಲ್ಲಿಗೆ ಹೋಗಿಬಂದ ಅನೇಕರು ಹೇಳಿದ್ದಾರೆ. ಈ ನಂಬಿಕೆಯಿಂದಲೇ ಶಬರಿಮಲೆ ಕ್ಷೇತ್ರ ವಿಶ್ವವಿಖ್ಯಾತವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ನಗರದ ಗೋಕುಲ ಬಡಾವಣೆಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಬಳಗದಿಂದ ನಡೆದ 30ನೇ ವರ್ಷದ ಅಯ್ಯಪ್ಪ ಸ್ವಾಮಿ ಭಜನಾ ಮಹೋತ್ಸವದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರಿಗೆ ಈ ವೇಳೆ ಅಯ್ಯಪ್ಪ ಸ್ವಾಮಿ ಭಕ್ತಿ ಬಳಗ ಪ್ರದಾನ ಮಾಡಿದ ತುಮಕೂರು ದಸರಾ ಹಮ್ಮೀರ ಪ್ರಶಸ್ತಿ ಹಾಗೂ ಬೆಳ್ಳಿ ಖಡ್ಗ ಸ್ವೀಕರಿಸಿ ಮಾತನಾಡಿದರು.ಶಬರಿಮಲೆ ಮಾದರಿಯಲ್ಲಿ ಮಂಟಪ ನಿರ್ಮಾಣ ಮಾಡಿ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನೆ ಮಾಡಿ, ಶಬರಿಮಲೆಗೆ ಹೋಗಲು ಸಾಧ್ಯವಾಗದವರಿಗೆ ಇಲ್ಲಿಯೇ ಅಯ್ಯಪ್ಪನ ದರ್ಶನದ ವ್ಯವಸ್ಥೆ ಮಾಡಿದ್ದಾರೆ. ಅಯ್ಯಪ್ಪಸ್ವಾಮಿಗೆ ಹೊರದೇಶಗಳಲ್ಲೂ ಭಕ್ತರಿದ್ದಾರೆ. ಅವರೂ ಶಬರಿಮಲೆಗೆ ಬಂದು ದೇವರ ದರ್ಶನ ಮಾಡುತ್ತಾರೆ ಎಂದರು.ವಿಶ್ವವಿಖ್ಯಾತ ಮೈಸೂರು ದಸರಾದ ಮಾದರಿಯಲ್ಲೇ ತುಮಕೂರಿನಲ್ಲೂ ದಸರಾ ಮಹೋತ್ಸವ ಆಚರಿಸಬೇಕು ಎಂದು ಆಸೆಪಟ್ಟು ಈವರೆಗೆ ಆಚರಿಸಿಕೊಂಡು ಬರುತ್ತಿದ್ದ ಸಮಿತಿಯವರು, ಅಧಿಕಾರಿಗಳ, ನಾರರಿಕರ ಸಭೆ ನಡೆಸಿ ಈ ಬಾರಿ ವಿಜೃಂಭಣೆಯಿಂದ ತುಮಕೂರಿನಲ್ಲಿ ದಸರಾ ಆಚರಿಸಿದೆವು. ಇದರಲ್ಲಿ ನಾನು ನಿಮ್ಮಿತ್ತ ಮಾತ್ರ. ಮುಂದಿನ ಬಾರಿಯೂ ಎಲ್ಲರ ಸಹಕಾರದಿಂದ ವೈಭವದಿಂದ ದಸರಾ ಮಹೋತ್ಸವ ಆಚರಿಸೋಣ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಮಾತನಾಡಿ, ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ತುಮಕೂರಿನಲ್ಲಿ ಆಚರಣೆಯಾದ ದಸರಾ ಮಹೋತ್ಸವ ನಾವೆಲ್ಲಾ ಹೆಮ್ಮೆ ಪಡುವಂತಾದ್ದು, ಮುಂದಿನ ದಿನಗಳಲ್ಲೂ ವೈಭವದ ದಸರಾ ಮಹೋತ್ಸವ ಮುಂದುವರೆಯಲಿ ಎಂದು ಆಶಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಯ್ಯಪ್ಪ ಭಕ್ತ ಬಳಗದ ಗೌರವಾಧ್ಯಕ್ಷ ಅಶೋಕ್, ಅಧ್ಯಕ್ಷ ಪ್ರತಾಪ್ ಮದಕರಿ, ಮುಖಂಡರಾದ ಪ್ರೇಮ್‌ಕುಮಾರ್, ಗೋಪಾಲ ಜೆ.ಕೃಷ್ಣ, ಆರ್.ರಾಮಕೃಷ್ಣ, ವಾಲೆ ಚಂದ್ರಯ್ಯ ಮೊದಲಾದವರು ಭಾಗವಹಿಸಿದ್ದರು.30ನೇ ವರ್ಷದ ಅಯ್ಯಪ್ಪಸ್ವಾಮಿ ಭಜನಾ ಮಹೋತ್ಸವದ ಅಂಗವಾಗಿ ವಿಶೇಷವಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಇರುವಂತೆ ಸತ್ಯವಾದ 18 ಮೆಟ್ಟಿಲುಗಳು ಹಾಗೂ ಅಯ್ಯಪ್ಪ ಸ್ವಾಮಿ ದೇವಾಲಯದ ಮಾದರಿಯಲ್ಲಿ ಮಂಟಪ ನಿರ್ಮಾಣ ಮಾಡಿ, ಅಲಂಕೃತ ಮಂಟಪದಲ್ಲಿ ಅಯ್ಯಪ್ಪಸ್ವಾಮಿಯ ಪ್ರತಿಷ್ಠಾಪಿಸಿಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಪಂಚಾಮೃತ ಅಭಿಷೇಕ, ಪಡಿಪೂಜೆ ಹರಿವರಾಸನಂ ಮತ್ತಿತರ ಪೂಜಾ ಕೈಂಕರ್ಯಗಳು ನೆರವೇರಿದವು. ಇದರ ಪ್ರಯುಕ್ತ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.ಸುಧೀರ್ ಗುರುಸ್ವಾಮಿಯವರ ಆನಂದ ಕಲಾವೃಂದ ತಂಡದಿಂದ ಅಯ್ಯಪ್ಪಸ್ವಾಮಿ ಭಜನೆ ಏರ್ಪಡಿಸಲಾಗಿತ್ತು.