ಸಂಸ್ಕೃತ ಭಾಷೆಯಲ್ಲಿ ಸಂಸ್ಕಾರ, ಜ್ಞಾನ ಅಡಕವಾಗಿದೆ: ಜಿ.ವಿಜಯಕುಮಾರ್

| Published : May 18 2024, 12:43 AM IST

ಸಂಸ್ಕೃತ ಭಾಷೆಯಲ್ಲಿ ಸಂಸ್ಕಾರ, ಜ್ಞಾನ ಅಡಕವಾಗಿದೆ: ಜಿ.ವಿಜಯಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಸಂಸ್ಕೃತ ಭಾಷೆಯಲ್ಲಿ ಸಂಸ್ಕಾರ, ಜ್ಞಾನ, ಸಂಸ್ಕೃತಿ ಹಾಗೂ ವಿಜ್ಞಾನ ಅಡಕವಾಗಿವೆ. ದೇಶದ ಪವಿತ್ರ ಗ್ರಂಥಗಳು ಸಂಸ್ಕೃತ ಭಾಷೆಯಲ್ಲಿ ರಚಿತವಾಗಿವೆ. ಇಂತಹ ಭಾಷೆಯ ಪುನರುತ್ಥಾನಕ್ಕೆ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಂಸ್ಕೃತ ಕಲಿಸುವ ಹತ್ತಾರು ಯೋಜನೆ ರೂಪಿಸಿದ್ದಾರೆ. ವಿವಿ ಕುಲಪತಿ ಶ್ರೀನಿವಾಸ ವರಖೇಡಿ ಮೂಲತಃ ಕರ್ನಾಟಕದವರಾಗಿದ್ದು, ಹೊಸ ಹೊಸ ಯೋಜನೆ ರೂಪಿಸಿ ಸಂಸ್ಕೃತ ಭಾಷಾ ಪ್ರಚಾರಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿಶ್ವವನ್ನೇ ಒಗ್ಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ. ದೆಹಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ವತಿಯಿಂದ ಹಲವಾರು ಯೋಜನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಸ್ಕೃತ ಕಲಿಕೆ ಆಸಕ್ತರಿಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು.

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ದೆಹಲಿ, ಸಂಸ್ಕೃತ ಭಾರತಿ ಶಿವಮೊಗ್ಗ, ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕ, ಗೀರ್ವಾಣ ಭಾರತಿ ಶ್ರೀ ಆದಿಚುಂಚನಗಿರಿ ಘಟಕ ಹಾಗೂ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಆಶ್ರಯದಲ್ಲಿ ಹಿಮಾಲಯದ ಚಂದ್ರಕಾಣಿ ಪಾಸ್ ನಲ್ಲಿ ಸಂಸ್ಕೃತ ಧ್ವಜಾರೋಹಣ ಮಾಡಲು ಚಾರಣಕ್ಕೆ ಹೊರಟಿರುವ ಸಾಹಸಿಗರಿಗೆ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ ಸಂಸ್ಕೃತ ಭಾಷೆಯಲ್ಲಿ ಸಂಸ್ಕಾರ, ಜ್ಞಾನ, ಸಂಸ್ಕೃತಿ ಹಾಗೂ ವಿಜ್ಞಾನ ಅಡಕವಾಗಿವೆ. ದೇಶದ ಪವಿತ್ರ ಗ್ರಂಥಗಳು ಸಂಸ್ಕೃತ ಭಾಷೆಯಲ್ಲಿ ರಚಿತವಾಗಿವೆ. ಇಂತಹ ಭಾಷೆಯ ಪುನರುತ್ಥಾನಕ್ಕೆ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಂಸ್ಕೃತ ಕಲಿಸುವ ಹತ್ತಾರು ಯೋಜನೆ ರೂಪಿಸಿದ್ದಾರೆ. ವಿವಿ ಕುಲಪತಿ ಶ್ರೀನಿವಾಸ ವರಖೇಡಿ ಮೂಲತಃ ಕರ್ನಾಟಕದವರಾಗಿದ್ದು, ಹೊಸ ಹೊಸ ಯೋಜನೆ ರೂಪಿಸಿ ಸಂಸ್ಕೃತ ಭಾಷಾ ಪ್ರಚಾರಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಚಾರಣಿಗರ ತಂಡವು 2024ರ ಮೇ 26ರಂದು ಹಿಮಾಚಲ ಪ್ರದೇಶದ ಕುಲು ಕಣಿವೆಯ ಚಂದ್ರಕಾಣಿ ಪಾಸ್ 12 ,500 ಅಡಿ ಎತ್ತರ ಪ್ರದೇಶದಲ್ಲಿ ಧ್ವಜಾರೋಹಣ ಮಾಡಲಿದೆ. ದೇಶದ 13 ರಾಜ್ಯಗಳಿಂದ ಕೇಂದ್ರೀಯ ವಿಶ್ವ ವಿದ್ಯಾನಿಲಯದ 26 ಜನ ವಿದ್ಯಾರ್ಥಿಗಳ ಜತೆಗೆ ಕರ್ನಾಟಕದ 28 ಜನರ ತಂಡ ಐತಿಹಾಸಿಕ ಕಾರ್ಯಕ್ರಮಕ್ಕೆ ತೆರಳಲಿದೆ. ಶಿವಮೊಗ್ಗ ನಗರದ ಸಾಹಸಿ ಅ.ನಾ. ವಿಜಯೇಂದ್ರರಾವ್ ತಂಡದ ನಾಯಕರಾಗಿ ಆಯ್ಕೆಯಾಗಿ ಹೋಗುತ್ತಿರುವುದು ರಾಜ್ಯ ಹಾಗೂ ಶಿವಮೊಗ್ಗ ನಗರಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ವೈ.ಎಚ್.ಎ.ಐ. ತರುಣೋದಯ ಘಟಕದ ಕಾರ್ಯಾಧ್ಯಕ್ಷ ಎಸ್.ಎಸ್. ವಾಗೀಶ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅ.ನಾ.ವಿಜಯೇಂದ್ರರಾವ್, ಆದಿತ್ಯ ಪ್ರಸಾದ್ ಇದ್ದರು.