ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಕೆಲವು ಶಿಕ್ಷಕರು ಗಣತಿ ಕಾರ್ಯದ ಸಮಯದಲ್ಲಿ ಮನೆ ಮನೆಗೆ ಭೇಟಿ ನೀಡುವಾಗ ಹೆಜ್ಜೇನು, ಹುಳ, ನಾಯಿಗಳು ಕಚ್ಚಿ ಹಾಗೂ ರಸ್ತೆ ಅಪಘಾತಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಅಂತಹ ಶಿಕ್ಷಕರನ್ನು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೋಮವಾರ ಮೂಲ್ಕಿ, ಉಳ್ಳಾಲ ಮತ್ತು ಬಂಟ್ವಾಳದಲ್ಲಿ ಭೇಟಿ ಮಾಡಿದರು.