ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಮತ್ತು ವಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಬಜತ್ತೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ ನೆರವೇರಿತು.
ಗಡಿನಾಡಿನಲ್ಲಿ ಮಲಯಾಳೀಕರಣ ವಿರೋಧಿಸಿ ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರಕಟಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮಂಗಳೂರು ಘಟಕದ ವತಿಯಿಂದ ಪರಿಷತ್ತಿನ ಸಾಧಕರಿಗೆ ಸನ್ಮಾನ ಸಮಾರಂಭ ಮಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ನಡೆಯಿತು.
ಮಂಗಳೂರು ವಿವಿ ಕಾಲೇಜಿನಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ - 2025 ಕಾರ್ಯಕ್ರಮ ಭಾನುವಾರ ಉದ್ಘಾಟನೆಗೊಂಡಿತು.
ಕ್ಯಾಂಪ್ಕೊ ಆಡಳಿತ ಮಂಡಳಿಗೆ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಚುನಾವಣೆ ನಡೆಯಿತು. ಒಟ್ಟು 5,576 ಸದಸ್ಯ ಮತದಾರರು ಇದ್ದು, 2,573 ಮಂದಿ ಮತ ಚಲಾಯಿಸಿದ್ದು, ಶೇ. 45.53ರಷ್ಟು ಮತದಾನವಾಗಿದೆ.
ಪ್ರಿಯದರ್ಶಿನಿ ಕೋ-ಆಪರೆಟಿವ್ ಸೊಸ್ಯೆಟಿ ಹಳೆಯಂಗಡಿಯ ಸಭಾ ಭವನದಲ್ಲಿ ಜರಗಿದ 2025ನೇ ಸಾಲಿನ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.
ವಿಶ್ವದ ಏಕೈಕ ರೋಬೋಟಿಕ್ ವೇದಿಕೆ ಸ್ಕೈವಾಕರ್ ರೊಬೊಟಿಕ್ ಸಿಸ್ಟಮ್ ಬಳಸಿಕೊಂಡು 67 ವರ್ಷದ ನಿವೃತ್ತ ಶಿಕ್ಷಕಿಗೆ ಸಂಕೀರ್ಣ ಎನಿಸಿದ ರೋಬೋಟಿಕ್ ನೆರವಿನ ಸಮಗ್ರ ಮೊಣಕಾಲು ಬದಲಿ (ಟಿಕೆಆರ್) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.
ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನೆರವೇರಿತು.
ಮೆಡಿಕಲ್, ಡೆಂಟಲ್, ಫಾರ್ಮಸಿ, ನರ್ಸಿಂಗ್, ಫಿಸಿಯೋಥೆರಪಿ, ಹೆಲ್ತ್ಕೇರ್ ಮ್ಯಾನೇಜ್ಮೆಂಟ್ ಮತ್ತು ಇತರೆ ಹೆಲ್ತ್ ಸೈನ್ಸಸ್ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ತಮ್ಮ ಕುಟುಂಬದ ಸದಸ್ಯರ, ಅಧ್ಯಾಪಕ ವರ್ಗ ಮತ್ತು ಆರೋಗ್ಯ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಪಡೆದು ಸಂಭ್ರಮಿಸಿದರು
dakshina-kannada