ದ. ಕ ಜಿಲ್ಲೆಯ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಒದಗಿಸುವ ಯೋಜನೆಯ ಉದ್ಘಾಟನಾ ಸಮಾರಂಭ ಮತ್ತು ಆರೋಗ್ಯ ಶಿಬಿರ ಮಂಗಳವಾರ ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯಿತು.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸತ್ಯ ಯಾವಾಗಲೂ ದಾಖಲೆಯಲ್ಲಿ ಇರುತ್ತದೆ. ಆರೋಪ ಮಾಡಿದವರು ಇದುವರೆಗೂ ಲಿಖಿತವಾಗಿ ದೂರು ನೀಡಿಲ್ಲ. ಹಾಗಾಗಿ ಅದು ಚರ್ಚೆಯ ವಿಷಯ ಅಲ್ಲ ಎಂದು ಹೇಳಿದ್ದಾರೆ.
ವಕೀಲ ಕೆ.ಎಂ. ಕೃಷ್ಣ ಭಟ್ ರಚಿಸಿದ ‘ಇಂದ್ರ ಧನುಸ್’ ಲಲಿತ ಪ್ರಬಂಧ ಸಂಕಲನ ನಗರದ ಪ್ರೆಸ್ಕ್ಲಬ್ನಲ್ಲಿ ಮಂಗಳವಾರ ಲೋಕಾರ್ಪಣೆಗೊಂಡಿತು.
ತಪೋಭೂಮಿ ಹರಿದ್ವಾರದ ಭೂಪತ್ವಾಲಾದಲ್ಲಿರುವ 1008 ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಸಂಸ್ಥಾನಮ್ ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಸಾಧನಾ ಕುಟೀರದ 9 ನೇ ವಾರ್ಷಿಕೋತ್ಸವ ಪ್ರಯುಕ್ತ ಮಂಗಳವಾರ ಸಂತ ಸಮಾವೇಶ ಸಂಪನ್ನಗೊಂಡಿತು.
ನರೇಂದ್ರ ಮೋದಿ ಅವರು ನ.28ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ವಿಮಾನ ನಿಲ್ದಾಣದಲ್ಲಿ ನಡೆಯಿತು.
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ ಸ್ಥಾಪನೆಯಾಗಿ 550 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಾರ್ಧ ಪಂಚ ಶತಮಾನೋತ್ಸವ ಕಾರ್ಯಕ್ರಮ ನ.27ರಿಂದ ಡಿ.7ರತನಕ ನಡೆಯಲಿದೆ.
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಸಸಿಹಿತ್ಲು ಕ್ಷೇತ್ರದಲ್ಲಿ 30 ವಿವಿಧ ಸಮಿತಿಗಳ ಸಮಾಲೋಚನಾ ಸಭೆ ಇತ್ತೀಚೆಗೆ ನೆರವೇರಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ಅಂಗವಾಗಿ ಬುಧವಾರ ಬ್ರಹ್ಮರಥೋತ್ಸವ ನೆರವೇರಿತು. ಭಕ್ತರ ಜಯಘೊಷದೊಂದಿಗೆ ಬುಧವಾರ ಬೆಳಗ್ಗೆ 7.29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರಾದರು
ರೈತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜಾತ್ಯತೀತ, ಪಕ್ಷಾತೀತ, ಕಾನೂನಾತ್ಮಕ ಮತ್ತು ವಿಷಯಾಧಾರಿತ ನಿಲುವಿನೊಂದಿಗೆ ಕಡಬ ತಾಲೂಕು ಕಚೇರಿ ಬಳಿ ಮಂಗಳವಾರ ಬೃಹತ್ ಹಕ್ಕೊತ್ತಾಯ ಸಭೆ ನಡೆಯಿತು.
ಜವಾಬ್ದಾರಿ ನೀಡಿದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
dakshina-kannada