ಸಾಹಿತ್ಯ ಬದುಕಿಗೆ ಶ್ರೀಮಂತಿಕೆ ನೀಡುತ್ತದೆ: ಎ.ಪಿ. ಮಾಲತಿಸಂಪ್ಯದ ಅಕ್ಷಯ ಕಾಲೇಜು ಸಭಾಂಗಣದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು, ಗ್ರಾಮ ಪಂಚಾಯಿತಿ ಆರ್ಯಾಪು, ಅದ್ವಯ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಅಕ್ಷಯ ಕಾಲೇಜು ಸಂಪ್ಯ ಆಶ್ರಯದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಅವರ ಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ಅಂಗವಾಗಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ-೨೦೨೫ ಸರಣಿ ಸಾಹಿತ್ಯ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.