ಮಂಗಳೂರು ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು.ದೇವರ ಬಲಿ ಉತ್ಸವದ ಶುಭ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸಿ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು.
ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಆರೋಪಿ ಕೃಷ್ಣ ರಾವ್ ಮನೆಯ ಮುಂದೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಕೆ ನೀಡಿದ್ದಾರೆ.