ಮಂಗ್ಳೂರಲ್ಲಿ ಸುಹಾಸ್ ಬಳಿಕ ಇನ್ನೊಂದು ಹತ್ಯೆಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲೇ ಇದೀಗ ಪಿಕಪ್ ವಾಹನ ಚಾಲಕನಾಗಿದ್ದ ಹಾಗೂ ಮಸೀದಿ ಸಮಿತಿಯೊಂದರ ಕಾರ್ಯದರ್ಶಿ ಆಗಿದ್ದ ರಹೀಮ್ ಎಂಬುವರನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.