ಮಂಗಳೂರು ವಿಶ್ವವಿದ್ಯಾನಿಲಯ ಯಕ್ಷಮಂಗಳ ಪ್ರಶಸ್ತಿ ಪ್ರಕಟಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಕಾಸರಗೋಡು, ಹಿರಿಯ ಯಕ್ಷಗಾನ ಕಲಾವಿದ, ವಿದ್ವಾಂಸ ಪ್ರೊ.ಎಂ.ಎಲ್ .ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, ಪತ್ರಕರ್ತ ಶಿರಸಿಯ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಕೃತಿಯು ಆಯ್ಕೆಯಾಗಿದೆ.