ಇಂದಿನಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಪಡೀಲಿನಲ್ಲಿ ಕಾರ್ಯಾರಂಭಸಂಜೆ 3.30 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಜಾ ಸೌಧ ಲೋಕಾರ್ಪಣೆಗೊಳಿಸುವರು. ಈ ಸಂದರ್ಭ ನನ್ನ ಭೂಮಿ ಪಹಣಿ ಪತ್ರ ವಿತರಿಸುವ ಕಾರ್ಯವೂ ನಡೆಯಲಿದೆ. ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇ ಗೌಡ, ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಸುರೇಶ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇ ಗೌಡ, ಜಿಲ್ಲೆಯ ಸಂಸದರು, ಶಾಸಕರು, ನಿಗಮಗಳ ಅಧ್ಯಕ್ಷರುಗಳು, ಅಧಿಕಾರಿಗಳು ಭಾಗವಹಿಸುವರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.