ಭದ್ರತಾ ವ್ಯವಸ್ಥೆಗಳ ನಿರಂತರ ಪರಿಶೀಲನೆ: ಬೃಹತ್ ಕೈಗಾರಿಕೆಗಳಿಗೆ ಜಿಲ್ಲಾಧಿಕಾರಿ ಸೂಚನೆಪ್ರಮುಖ ತೈಲ, ಅನಿಲ ಘಟಕಗಳು, ಬಂದರು, ವಿಮಾನ ನಿಲ್ದಾಣಗಳಲ್ಲಿ ವಿಪತ್ತು ನಿರ್ವಹಣೆಗೆ ಕೂಡಲೆ ಅಣಕು ಪ್ರದರ್ಶನ ನಡೆಸಬೇಕು. ಜಿಲ್ಲಾಡಳಿತದೊಂದಿಗೆ ಸಮನ್ವಯದಿಂದ ಕಾರ್ಯಾಚರಿಸಬೇಕು. ದಿನದ 24 ಗಂಟೆಯೂ ಕಾರ್ಯಾಚರಿಸುವ ಕಂಟ್ರೋಲ್ ರೂಂ ಕಾರ್ಯಾಚರಿಸುತ್ತಿದೆ. ಭದ್ರತಾ ವ್ಯವಸ್ಥೆಗಳ ಬಗ್ಗೆ ನಗರ ಪೊಲೀಸ್ ಆಯುಕ್ತರು ಆಗಿಂದಾಗ್ಗೆ ಪರಿಶೀಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.