ಕರ್ತವ್ಯದಲ್ಲಿದ್ದ ವೈದ್ಯರಿಗೆ ಹಲ್ಲೆ ಯತ್ನ ಆರೋಪ: ಪ್ರತಿಭಟನೆಆರೋಪಿಯ ಬಂಧನಕ್ಕೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ, ಡಾಕ್ಟರ್ಸ್ ಫಾರಂ, ಆಯುಷ್ ಸಂಸ್ಥೆ ಹಾಗೂ ಇಂಡಿಯನ್ ಡೆಂಟಲ್ ಅಸೋಸಿಯೇಶನ್ ನೇತೃತ್ವದಲ್ಲಿ, ಬಿಜೆಪಿ ಮತ್ತು ವಿವಿಧ ಹಿಂದೂಪರ ಸಂಘಟನೆಗಳ ಸಹಕಾರದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಆರೋಪಿಯ ಬಂಧನಕ್ಕೆ ಗಡುವು ನೀಡಿದ ಘಟನೆ ಶನಿವಾರ ಪುತ್ತೂರು ನಗರದಲ್ಲಿ ನಡೆದಿದೆ.