ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಐವನ್ ಒತ್ತಾಯಬೆಂಗಳೂರು ಹೊರತುಪಡಿಸಿ ಚಾಮರಾಜನಗರ, ನಂದಿಹಿಲ್ಸ್, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ಆಯಾ ಭಾಗದ ಅಭಿವೃದ್ಧಿಗೆ ಪೂರಕವಾಗಿದೆ. ಮಂಗಳೂರಿನಲ್ಲಿ ಸಭೆ ನಡೆದರೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಸಮಸ್ಯೆಗಳ ಪರಿಹಾರ ಹಾಗೂ ದೂರದೃಷ್ಟಿಯ ಯೋಜನೆಗಳ ಜಾರಿಗೆ ಅನುಕೂಲವಾಗಲಿದೆ ಎಂದು ಐವನ್ ಡಿಸೋಜ ಹೇಳಿದ್ದಾರೆ.