• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ: ಸ್ಥಳ ಪರಿಶೀಲನೆ
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ 153/1 ಸರ್ವೆ ನಂಬರ್‌ನಲ್ಲಿ ಹಾಗೂ ಧರ್ಮಸ್ಥಳ ಗ್ರಾಮದ 57 ಸರ್ವೆ ನಂಬರ್‌ನಲ್ಲಿ ಒಟ್ಟು 157.93 ಎಕ್ರೆ ಜಮೀನನ್ನು ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ. ಸದ್ರಿ ಜಮೀನಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.
ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್ ನೀಡಲು ಗಡುವು ಇಲ್ಲ
ಡಿ.31ರೊಳಗೆ ಆಧಾರ್‌ ದೃಢೀಕರಣ ಮಾಡದೆ ಇದ್ದರೆ ಅಡುಗೆ ಅನಿಲ ಸಬ್ಸಿಡಿ ಬರುವುದಿಲ್ಲ ಹಾಗೂ ಗ್ಯಾಸ್‌ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸುದ್ದಿ ಜಾಲತಾಣಗಳಲ್ಲಿ ಹರಡಿದ್ದೇ ತಡ ಜನರು ಗ್ಯಾಸ್‌ ಏಜೆನ್ಸಿಗಳಿಗೆ ಧಾವಿಸಲು ಆರಂಭಿಸಿದ್ದಾರೆ. ಏಜೆನ್ಸಿಯ ಸಿಬ್ಬಂದಿ ತಿಳಿಹೇಳಿದರೂ ಜನರು ಹರಿಹಾಯ್ದ ಪ್ರಕರಣಗಳೂ ಅಲ್ಲಲ್ಲಿ ನಡೆದಿವೆ.
ಕ್ರಿಸ್‌ಮಸ್ ಶಾಂತಿ, ಪ್ರೀತಿ, ನೆಮ್ಮದಿ ಮೂಡಿಸಲಿ: ಬಿಷಪ್‌ ಸಂದೇಶ
ಮೊದಲು ಶಾಂತಿ ನಮ್ಮ ಹೃದಯದಲ್ಲಿ ಮೂಡಿ ಬರಬೇಕು. ಬಳಿಕ ಎಲ್ಲೆಡೆ ಪಸರಿಸಬೇಕು. ಮನುಷ್ಯರ ನಡುವೆ ಜಾತಿ, ಮತ, ಧರ್ಮವನ್ನು ಮೀರಿ ಪರಸ್ಪರ ಗೌರವದೊಂದಿಗೆ, ಶಾಂತಿ, ಪ್ರೀತಿಯೊಂದಿಗೆ ಬದುಕಬೇಕಾಗಿದೆ. ಈ ಜಗತ್ತನ್ನು ಸರ್ವ ಜನರ ಶಾಂತಿಯ ತೋಟವಾಗಿ ಪರಿವರ್ತಿಸಬೇಕಾಗಿದೆ ಎಂದು ಮಂಗಳೂರು ಬಿಷಪ್ ಪೀಟರ್ರ್‌ ಪೌಲ್ಲ್‌ ಸಲ್ದಾನ ಅಭಿಪ್ರಾಯಪಟ್ಟಿದ್ದಾರೆ.
ಪುತ್ತೂರು: ನಾಳೆ ಆಂಜನೇಯ ಯಕ್ಷಗಾನ ಕಲಾ ಸಂಘದ 55ರ ಸಂಭ್ರಮ
ಸಂಜೆ ಗಂಟೆ 5 ಗಂಟೆಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೇಯ 55 ಸಂಭ್ರಮ- ಸಭಾ ಕಾರ್ಯಕ್ರಮ ನಡೆಯಲಿದೆ. `ಶ್ರೀ ಆಂಜನೇಯ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಪೂಕಳ ಲಕ್ಷ್ಮೀ ನಾರಾಯಣ ಭಟ್ ಅವರಿಗೆ ಹಾಗೂ ಶ್ರೀ ಆಂಜನೇಯ 55 ರ ಗೌರವವನ್ನು ಅರ್ಥಧಾರಿ ಜಬ್ಬಾರ್ ಸಮೋ ಅವರಿಗೆ ಪ್ರದಾನ ಮಾಡಲಾಗುವುದು.
ಮಂಗಳೂರಿನಲ್ಲಿ ದ್ರಾಕ್ಷಾರಸ ಮೇಳಕ್ಕೆ ಚಾಲನೆ
ಗುರುವಾರ ಸಂಜೆ ಮಂಗಳೂರಿನಲ್ಲಿ ವೈನ್ ಮೇಳವನ್ನು ರೋಹನ್ ಕಾರ್ಪೊರೇಶನ್‌ನ ರೋಹನ್‌ ಮೋಂತೆರೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವೈನ್‌ ಮೇಳ ಆಯೋಜಿಸುವುದರಿಂದ ದ್ರಾಕ್ಷಿ ಬೆಳೆಗಾರರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಜನರಿಗೂ ಗುಣಮಟ್ಟದ ವೈನ್‌ ದೊರೆಯಲಿದೆ ಎಂದರು.
ರಘು ಇಡ್ಕಿದು ಅವರ ‘ಎಲ್ಲವೂ ಬದಲಾಗುತ್ತದೆ’ ಕೃತಿ ಲೋಕಾರ್ಪಣೆ
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಅಧ್ಯಕ್ಷ ಪುತ್ತೂರು ಉಮೇಶ್‌ ನಾಯಕ್‌ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಪರಿವರ್ತನೆ ಜಗದ ನಿಯಮ ಎಂಬಂತೆ ಕಾವ್ಯ ಹಾಗೂ ಸಾಹಿತ್ಯವೂ ಕಾಲಕಾಲಕ್ಕೆ ಮಾರ್ಪಾಟನ್ನು ಹೊಂದಿ ಪ್ರಸ್ತುತ ವಿಶೇಷ ಪ್ರಕಾರಗಳನ್ನು ಹೊಂದುತ್ತಿದೆ. ಅದೇ ರೀತಿ ಎಲ್ಲವೂ ಬದಲಾಗುತ್ತದೆ ಎನ್ನುವ ಕವನಸಂಕಲನ ಶ್ರೇಷ್ಠ ಮತ್ತು ವಿಭಿನ್ನ ರೀತಿಯಲ್ಲಿ ಮೂಡಿ ಬಂದಿದೆ.
ಮಂಗ್ಳೂರು ಪಾಲಿಕೆ ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ
ಮಂಗಳೂರು ಮಹಾನಗರ ಪಾಲಿಕೆಯ ವಾರ್ಡಿನ ಕೆಲವು ಭಾಗಗಳಲ್ಲಿ ಇರುವಂತಹ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪಾಲಿಕೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸುವುದು, ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವುದು, ಹಾಗೂ ರಸ್ತೆಗಳನ್ನು ನಿರ್ಮಿಸುವುದು ಇತ್ಯಾದಿ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.
ಸಾಹಿತಿ, ವಾಗ್ಮಿ, ವಿದ್ವಾಂಸ ತೋಳ್ಪಾಡಿ ಪ್ರಬಂಧಕ್ಕೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ
ಲಕ್ಷ್ಮೀಶ ತೋಳ್ಪಾಡಿ ಅವರ ‘ಕನ್ನಡದ ಮಹಾಭಾರತ ಅನುಸಂಧಾನ ಭಾರತಯಾತ್ರೆ’ ಪ್ರಬಂಧಕ್ಕೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದೆ. ತೋಳ್ಪಾಡಿ ಅವರು ದ.ಕ. ಜಿಲ್ಲೆಯ ಪುತ್ತೂರಿನವರು. ಶಾಂತಿಗೋಡು ಗ್ರಾಮದ ಕೆಂಬ್ಲಾಜೆ ಎಂಬಲ್ಲಿ ತನ್ನ ಪತ್ನಿ ವಿಜಯಲಕ್ಷ್ಮೀ ಮತ್ತು ಮಕ್ಕಳಾದ ಪರೀಕ್ಷಿತ್ ತೋಳ್ಪಾಡಿ ಮತ್ತು ಮಾಳವಿಕರೊಂದಿಗೆ ವಾಸವಾಗಿದ್ದಾರೆ.
ಕೇರಳ ಗಡಿಯಲ್ಲಿ ಕೊರೋನಾ ಜಾಗೃತಿ, ತಪಾಸಣೆ: ಡಿಎಚ್‌ಒ
ಕಾಸರಗೋಡಿನಲ್ಲಿ ಪ್ರಸ್ತುತ 27 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25 ಮಂದಿ ಹೋಮ್‌ ಐಸೋಲೇಶನ್‌ನಲ್ಲಿದ್ದರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಕಾಸರಗೋಡಿನಲ್ಲಿ ದಿನವೊಂದಕ್ಕೆ ಕೇವಲ ಒಂದೆರಡು ಮಂದಿಗೆ ಮಾತ್ರ ಕೊರೋನಾ ಕಂಡುಬರುತ್ತಿದೆ. ಅಲ್ಲಿನ ಆರೋಗ್ಯಾಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆದರೆ ದಕ್ಷಿಣ ಕನ್ನಡದಲ್ಲಿ ಇದುವರೆಗೆ ಕೊರೋನಾ ಸೋಂಕು ಕಂಡುಬಂದಿಲ್ಲ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
‘ಪುರ್ಸ ಕಟ್ಟುನೆ: ಇನಿ-ಕೋಡೆ-ಎಲ್ಲೆ’ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ಅಂ.ರಾ. ಚಲನಚಿತ್ರೋತ್ಸವಕ್ಕೆ ಆಯ್ಕೆ
ಭಾರತದ ಬೇರೆ ಬೇರೆ ಭಾಷೆಗಳಿಂದ ಆಯ್ಕೆಯಾದ 70 ಸಾಕ್ಷ್ಯಚಿತ್ರ ಹಾಗೂ ಜಗತ್ತಿನ ಬೇರೆಬೇರೆ ದೇಶಗಳಿಂದ ಆಯ್ಕೆಯಾದ 310 ಚಲ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಅದರಲ್ಲಿ ತುಳು ಭಾಷೆಯ ಜಾನಪದ ವಿಭಾಗದಲ್ಲಿ ಈ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ತುಳು ಭಾಷೆಯ ಏಕೈಕ ಸಾಕ್ಷ್ಯಚಿತ್ರವಾಗಿ ಆಯ್ಕೆಯಾಗಿದೆ.
  • < previous
  • 1
  • ...
  • 614
  • 615
  • 616
  • 617
  • 618
  • 619
  • 620
  • 621
  • 622
  • ...
  • 654
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved