ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ ಗ್ರಾಮ ಸಮೀಪ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರ ಮನೆಗೆ ತೆರಳಿ ಸಾಂತ್ವನ ಹೇಳಿದ ಮಾಜಿ ಸಚಿವ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು, ಮೃತಪಟ್ಟ ಮೂವರ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ತಲಾ ಒಂದು ಲಕ್ಷ ರು. ಆರ್ಥಿಕ ನೆರವು ನೀಡಿದರು.

ಬಳಿಕ ಮಾತನಾಡಿದ ಅವರು, ಇದೊಂದು ದುರ್ಘಟನೆ. ಆದರೆ ಮುಂದಿನ ಬದುಕು ಕಟ್ಟಿಕೊಳ್ಳುವುದು ಅನಿವಾರ್ಯವಿದೆ. ಆದದ್ದೆಲ್ಲವನ್ನು ಮರೆತು ಕುಟುಂಬದ ಜವಾಬ್ದಾರಿ ಹೊತ್ತು ಕೆಲಸದಲ್ಲಿ ತೊಡಗಿಸಿಕೊಳ್ಳಿ ಎಂದು ಧೈರ್ಯ ತುಂಬಿದರು. ವಿಧಿಯಾಟದ ಮುಂದೆ ಯಾರೇನು ಮಾಡಲು ಸಾಧ್ಯವಿಲ್ಲ ಎಂದು ಅವರು, ಕುಟುಂಬಸ್ಥರ ರೋದನೆ ಕೇಳಿ ಮರುಗಿದರು.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತಪ್ಪ ಚಂದಾಪುರ, ಶಿವನಗೌಡ ಮಡ್ನಾಳ, ಬಸವರಾಜಪ್ಪಗೌಡ ಪಾಟೀಲ್, ಮಹಾಂತಗೌಡ ಪಾಟೀಲ್, ದೌಲತ್ ನಾಯ್ಕೋಡಿ ಸೇರಿದಂತೆ ಗ್ರಾಮಸ್ಥರು ಇದ್ದರು.

-----ಫೋಟೊ-----


26ವೈಡಿಆರ್16

ಭಾನುವಾರ, ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ ಗ್ರಾಮ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರ ಮನೆಗೆ ತೆರಳಿ ಸಾಂತ್ವನ ಹೇಳಿದ ಮಾಜಿ ಸಚಿವ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು, ಮೃತಪಟ್ಟ ಮೂವರ ಕುಟುಂಬಸ್ಥರಿಗೆ ತಲಾ ಒಂದು ಲಕ್ಷ ರೂಪಾಯಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.