• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಹಬ್ಬಕ್ಕಷ್ಟೇ ಜಿಲ್ಲಾಡಳಿತ ಅಡ್ಡಿ: ಬಿ.ಪಿ.ಹರೀಶ ಆರೋಪ
ಹಿಂದೂಗಳ ಹಬ್ಬಕ್ಕೆ ಮಾತ್ರ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶವೆಂದು ಸಬೂಬು ಹೇಳಿ, ಅಡ್ಡಿಪಡಿಸುವ ಜಿಲ್ಲಾಡಳಿತವು ಮಸೀದಿ- ದರ್ಗಾಗಳಲ್ಲಿ ಅದೇ ನ್ಯಾಯಾಲಯದ ಆದೇಶ ಉಲ್ಲಂಘಿಸಿ, ಧ್ವನಿವರ್ಧಕದಲ್ಲಿ ಕೂಗುವುದನ್ನು ಯಾಕೆ ತಡೆಯುತ್ತಿಲ್ಲ? ಜೀವಂತ ವ್ಯಕ್ತಿಗಳ ಹೆಸರನ್ನು ಸರ್ಕಾರಿ ಕಟ್ಟಡ, ಸಭಾಂಗಣ ಇತರೆ ಇಟ್ಟಿದ್ದನ್ನು ಯಾಕೆ ತೆರವುಗೊಳಿಸುತ್ತಿಲ್ಲ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಕಿಡಿಕಾರಿದ್ದಾರೆ.
29ರಂದು ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ರೈತರು ತಮ್ಮ ಅಳಿದುಳಿದ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕೃಷಿ ಮಾರುಕಟ್ಟೆ ಪ್ರಾರಂಭಿಸಬೇಕು. ಅತಿಯಾದ ಮಳೆಯಿಂದಾಗಿ ಹಾಳಾದ ಬೆಳೆಗಳನ್ನು ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸರ್ವೇ ನಡೆಸಬೇಕು. ಅಲ್ಲದೇ, ಬೆಳೆ ನಷ್ಟಕ್ಕೆ ಎರಡೂ ಸರ್ಕಾರಗಳು ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಕರಿಬಸಪ್ಪ ಗೌಡ ಮಾಚೇನಹಳ್ಳಿ ಒತ್ತಾಯಿಸಿದ್ದಾರೆ.
ಹೊಸ ಹೈಬ್ರಿಡ್‌ ಬೀಜಗಳ ಪ್ರಾತ್ಯಕ್ಷಿಕೆ ಯಶಸ್ವಿ: ಡಾ.ದುಷ್ಯಂತ ಕುಮಾರ್‌
ಮೆಕ್ಕೆಜೋಳ ಬೆಳೆಯಲ್ಲಿ ಉತ್ಪಾದಕತೆ ಹೆಚ್ಚಿಸಲು ಮುಳ್ಳುಸಜ್ಜೆ ಕಳೆ ನಿರ್ವಹಣೆ ಮತ್ತು ವಾತಾವರಣದಲ್ಲಿ ಏರುಪೇರಾಗುವ ಪರಿಸ್ಥಿತಿಗೆ ಹಾಗೂ ಬರಗಾಲಕ್ಕೂ ಹೊಂದಿಕೊಂಡು ರೈತರಿಗೆ ಆದಾಯ ತರುವಂತ ಹೊಸ ಹೈಬ್ರಿಡ್ ಬೀಜಗಳನ್ನು ಪರಿಚಯಿಸುವ ಮತ್ತು ಅವುಗಳ ಕಾರ್ಯಕ್ಷಮತೆ ಪರೀಕ್ಷಿಸುವ ಅನಿವಾರ್ಯ ಪರಿಸ್ಥಿತಿಗೆ ಉತ್ತರವಾಗಿ ಶಿವಮೊಗ್ಗದ ವಿ.ವಿ.ಯ ನಿರಂತರ ಪ್ರಯತ್ನದ ಮೊದಲ ಹೆಜ್ಜೆಯ ಪ್ರಾತ್ಯಕ್ಷಿಕೆ- ಕ್ಷೇತ್ರೋತ್ಸವದಲ್ಲಿ ಯಶಸ್ವಿಯಾಗಿದೆ ಎಂದು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಬಿ.ಎಂ. ದುಷ್ಯಂತಕುಮಾರ್ ಹೇಳಿದ್ದಾರೆ.
ಸಿಂಥೈಟ್ ಇಂಡಸ್ಟ್ರೀಸ್‌ನಲ್ಲಿ 120 ಕಾರ್ಮಿಕರ ಕಾಯಂಗೊಳಿಸಿ
ತಾಲೂಕಿಗೆ ಸಮೀಪದ ಕವಲೆತ್ತು ಗ್ರಾಮ ಹತ್ತಿರದ ಸಿಂಥೈಟ್ ಇಂಡಸ್ಟ್ರಿಸ್ ಕಾರ್ಖಾನೆಯಲ್ಲಿ ೧೮ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ೧೨೦ ಕಾರ್ಮಿಕರನ್ನು ಕಂಪನಿ ಮಾಲೀಕರು ಕಾಯಂಗೊಳಿಸಲು ಒತ್ತಾಯಿಸಿ ಹರಿಹರದ ಕಂಪನಿ ಮುಖ್ಯ ದ್ವಾರದ ಎದುರು ಪ್ರತಿಭಟನೆ ಆರಂಭವಾಗಿದೆ.
ಯುವಜನೋತ್ಸವ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ನಡೆಯಲಿ
ಯುವಜನೋತ್ಸವ ನಗರ ಪ್ರದೇಶಕ್ಕೆ ಸೀಮಿತವಾಗುವುದಕ್ಕಿಂತ ಅತಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಆಯೋಜಿಸುವುದರಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಲು ಸಹಾಯಕವಾಗುತ್ತವೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ಸಂಸದೆ
ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ತಿಂಗಳು ಸುಮಾರು 45 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಮಧ್ಯ ಕರ್ನಾಟಕ ಹೃದಯ ಭಾಗದಲ್ಲಿರುವ ಈ ಜಿಲ್ಲೆಗೆ ನೆರೆ ಜಿಲ್ಲೆಗಳಿಂದ ವೈದ್ಯಕೀಯ ಚಿಕಿತ್ಸೆ ಪಡೆಯಲು ರೋಗಿಗಳು ಬರುತ್ತಾರೆ. ಅವರಿಗೆ ವೆಂಟಿಲೇಟರ್ಸ್‌ ಫಿಸಿಯೋಥೆರಫಿ, ಲ್ಯಾಕ್ಟೋಸ್ಕೋಪಿ ಸೇರಿದಂತೆ ಮುಂತಾದ ಉಪಕರಣಗಳ ಕೊರತೆ ಇತ್ತು. ಇದರಿಂದ ಖಾಸಗಿ ಆಸ್ಪತ್ರೆಗಳಿಗೆ ಅಥವಾ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಕಳುಹಿಸಬೇಕಾದ ಅನಿವಾರ್ಯತೆ ದಟ್ಟವಾಗಿತ್ತು. ಆದರೆ, ಇಂದು ಸಿಎಸ್‌ಆರ್ ನಿಧಿಯಡಿ ನೀಡಲಾದ ಉಪಕರಣ ಸರಿಯಾದ ರೀತಿಯಲ್ಲಿ ಬಳಸಿ ಸಾರ್ವಜನಿಕರಿಗೆ ಉಪಯುಕ್ತ ಆಗುವಂತೆ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಿಜೆಐ ಮೇಲೆ ಶೂ ಎಸೆತ ಖಂಡನೀಯ
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆತ ಖಂಡಿಸಿ, ತಪ್ಪಿತಸ್ಥ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಗಡೀಪಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಬಣ) ಮತ್ತು ದಾವಣಗೆರೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾರ್ಯಕರ್ತರು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ.
ಮತ್ತೆ ಹಾಫ್ ಹೆಲ್ಮೆಟ್ ತಲೆಬಿಸಿ: ಎಸ್‌ಪಿ ಕ್ಲಾಸ್‌
ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಇದೀಗ ಮತ್ತೆ ಹಾಫ್ ಹೆಲ್ಮೆಟ್ ವಿರುದ್ಧ ಕಾರ್ಯಾಚರಣೆ ಆರಂಭವಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ವತಃ ಫೀಲ್ಡ್‌ಗೆ ಇಳಿದು ಹಾಫ್‌ ಹೆಲ್ಮೆಟ್‌ಧಾರಿಗಳಿಗೆ ಕಾನೂನು ಪಾಠ ಹೇಳಿದ್ದು ವಿಶೇಷವಾಗಿತ್ತು.
ಅನುದಾನಿತ ನೌಕರರಿಗೆ ಹಳೆಯ ಪಿಂಚಣಿ ಜಾರಿಗೊಳಿಸಿ ನೆರವಾಗಿ
ರಾಜ್ಯದಲ್ಲಿ 2006ರ ಪೂರ್ವ ನೇಮಕವಾದ ಅನುದಾನಿತ ನೌಕರರಿಗೆ ಹಳೆಯ ಪಿಂಚಣಿ ಜಾರಿಗೊಳಿಸಿ, ಮಾನವೀಯತೆ ಮೆರೆಯುವಂತೆ ಜಿಲ್ಲಾ ಅನುದಾನಿತ ನೌಕರರ ವೇದಿಕೆ ಮತ್ತು ಒಕ್ಕೂಟ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು.
ಸ್ವಾಸ್ಥ್ಯ ಸಮಾಜಕ್ಕಾಗಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಶ್ರಮ ಅಪಾರ
ಕ್ಯಾನ್ಸರ್ ಕಾಯಿಲೆಗೂ ಚಿಕಿತ್ಸೆ ಇದೆ. ಆದರೆ ಕುಡಿತದ ಚಟ ಬಿಡಿಸಲಿಕ್ಕೆ ಚಿಕಿತ್ಸೆ ಇಲ್ಲದಂತಹ ಸಮಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಲಕ್ಷಾಂತರ ಮದ್ಯವ್ಯಸನಿಗಳಿಗೆ ಕುಡಿತದ ಚಟ ಬಿಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಅವರ ಶ್ರಮ ನಿಜಕ್ಕೂ ಶ್ಲಾಘನಿಯ. ಅದಕ್ಕಾಗಿಯೇ ಡಾ.ವೀರೇಂದ್ರ ಹೆಗ್ಗಡೆ ಅವರು ಪೂಜ್ಯನೀಯ ಸ್ಥಾನದಲ್ಲಿದ್ದಾರೆ ಎಂದು ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 634
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved