ಇಂದು ಹೊನ್ನೂರು ಗ್ರಾಪಂಗೆ ಮಲ್ಲಶೆಟ್ಟಿಹಳ್ಳಿ ಗ್ರಾಮಸ್ಥರ ಮುತ್ತಿಗೆಕಲುಷಿತ ನೀರು ಪೂರೈಸಿ, ಜನರ ಜೀವನದೊಂದಿಗೆ ಆಟ ಆಡುತ್ತಿರುವ, ಗ್ರಾಮಸ್ಥರ ವಿರೋಧದ ಮಧ್ಯೆಯೂ ಸ್ಮಶಾನ ಅಭಿವೃದ್ಧಿಗೆ ಮುಂದಾದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣವೇ ಅಮಾನತುಗೊಳಿಸಲು ಆಗ್ರಹಿಸಿ, ಜು.2ರಂದು ಬೆಳಗ್ಗೆ 10.30 ಗಂಟೆಗೆ ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಗ್ರಾಮದ ಮುಖಂಡ, ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿದ್ದಾರೆ.