ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತೆ ಬಾನು ಆಯ್ಕೆ ಅರ್ಥಪೂರ್ಣನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನಾರ್ಹ. ಜಾತಿ, ಧರ್ಮದ ಸಂಕೋಲೆ ಮೀರಿ ವಿಶ್ವಕ್ಕೆ ಕನ್ನಡ ನಾಡಿನ ಸಾಂಸ್ಕೃತಿಕ, ಪರಂಪರೆ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿದ ಲೇಖಕಿ ಅವರಿಂದ ದಸರಾ ಚಾಲನೆಗೊಳ್ಳುತ್ತಿರುವುದು ಅರ್ಥಪೂರ್ಣ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟಿದ್ದಾರೆ.