• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡಲ ಸಂಗಮ ಶ್ರೀ ಕೆಳಗಿಳಿಸುವ ವಿಚಾರ ನೋವು ತಂದಿದೆ: ವಚನಾನಂದ ಶ್ರೀ
ಕೂಡಲ ಸಂಗಮ ಶ್ರೀಗಳನ್ನು ಪೀಠದಿಂದ ಕೆಳಗಿಳಿಸುವಂಥ ಘಟನೆಯಿಂದಾಗಿ ಸಹಜವಾಗಿಯೇ ನಮ್ಮ ಮನಸ್ಸಿಗೆ ತೀವ್ರ ನೋವಾಗಿದೆ. ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಏನಾದರೂ ಆದಾಗ ನೋವಾಗುವಂತೆ ನಮಗೂ ಆಗಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುವ ಭರವಸೆ ನಮಗೆ. ಇಂತಹ ವಿಚಾರಗಳನ್ನು ಮಾಧ್ಯಮಗಳ ಮುಂದೆ ಮಾತನಾಡುವುದು ಸರಿಯಲ್ಲ ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ನುಡಿದಿದ್ದಾರೆ.
ಭತ್ತ ಮಡಿ, ನಾಟಿಗೆ ಭದ್ರಾ ನಾಲೆಗೆ ನೀರು ಬಿಡಿ
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಬತ್ತದ ಬೀಜ ಚೆಲ್ಲಿ, ಸಸಿ ಮಡಿ ಸಿದ್ಧಪಡಿಸಿಕೊಂಡು ನಾಟಿಗಾಗಿ ಭದ್ರಾ ನೀರಿಗಾಗಿ ಕಾಯುತ್ತಿದ್ದಾರೆ. ಜು.21ರಿಂದಲೇ ಭದ್ರಾ ಡ್ಯಾಂನಿಂದ ಭದ್ರಾ ಕಾಲುವೆಗಳಿಗೆ ನೀರು ಹರಿಸುವಂತೆ ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ. ಸತೀಶ ಕೊಳೇನಹಳ್ಳಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರೈತರ ಸಂಘಟಿಸುವಲ್ಲಿ ಎಚ್‌.ಎಸ್‌.ರುದ್ರಪ್ಪ ಅಪಾರ ಶ್ರಮ
ರಾಜ್ಯದ ಉದ್ದಗಲಕ್ಕೂ ರೈತರ ಸಂಘಟನೆಗಳನ್ನು ಸಂಘಟಿಸುವಲ್ಲಿ ಹೊಸಕೊಪ್ಪ ಗ್ರಾಮದ ದಿವಂಗತ ಎಚ್.ಎಸ್.ರುದ್ರಪ್ಪ ಅತ್ಯಂತ ಪ್ರಮುಖ ಪಾತ್ರವಹಿಸಿ, ರೈತರ ಹಿತರಕ್ಷಣೆಗೆ ನಿರಂತರ ಶ್ರಮಿಸಿದ್ದರು ಎಂದು ರೈತ ಮುಖಂಡ ಬಿದರಗಡ್ಡೆ ಭರಮಪ್ಪಗೌಡ ಹೇಳಿದ್ದಾರೆ.
ಮಾತೃಭಾಷೆಗೆ ತಾತ್ಸಾರ ಮನೋಭಾವ ಸಲ್ಲದು
ಅವಮಾನ, ಅಭಿಮಾನ, ಸನ್ಮಾನಗಳು ಕನಸನ್ನು ನನಸು ಮಾಡುವ ಮಾರ್ಗಗಳಾಗಿವೆ. ಇವುಗಳನೆಲ್ಲಾ ಸಾರ್ಥಕಪಡಿಸಿದ ಕೀರ್ತಿ ಸಂತೆಬೆನ್ನೂರು ಗ್ರಾಮದ ನಾಡಿಗ್ ಅವರಿಗೆ ಸಲ್ಲುತ್ತದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದಿದ್ದಾರೆ.
ಆರ್‌ಟಿಐ ದ್ವಿತೀಯ ಮೇಲ್ಮನವಿ: ಜಿಲ್ಲೆಯಲ್ಲಿ 559 ಪ್ರಕರಣ
ಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಹೊಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ. ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ 2ನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದೆ. ನವೆಂಬರ್ ವೇಳೆಗೆ ಜಿಲ್ಲಾ ಹಂತದಲ್ಲಿ ಕಲಾಪ ನಡೆಸುವ ಮೂಲಕ ಅದಾಲತ್ ಮಾದರಿಯಲ್ಲಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಕ್ರಮವಹಿಸಲಾಗುತ್ತದೆ ಎಂದು ಮಾಹಿತಿ ಹಕ್ಕು ಆಯೋಗ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದ್ದಾರೆ.
ಇಂದು ರೈಸ್ ಮಿಲ್ ಆವರಣದಲ್ಲಿ ವನಮಹೋತ್ಸವ: ಮಹಾಂತೇಶ್‌
ಅಖಿಲ ಕರ್ನಾಟಕ ಗಾಣಿಗ ಸಮೂಹ ಸಂಘ ಮತ್ತು ದಾವಣಗೆರೆ ಜಿಲ್ಲಾ ಗಾಣಿಗರ ಸಮಾಜ ವತಿಯಿಂದ ಶ್ರೀಮತಿ ಬಸಮ್ಮ ಶ್ರೀ ಜಗಳೂರು ಮಹಲಿಂಗಪ್ಪ ಸವಿನೆನಪಿಗಾಗಿ ಜು.20ರಂದು ಬೆಳಗ್ಗೆ 10 ಗಂಟೆಗೆ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಗಾಣಿಗ ಸಮೂಹ ಸಂಘ ರಾಜಾಧ್ಯಕ್ಷ ಮಹಾಂತೇಶ್ ವಿ. ಚೋಳಚಗುಡ್ಡ ಹೇಳಿದ್ದಾರೆ.
ಚನ್ನಗಿರಿ: ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಎಚ್‌.ಎನ್‌.ಜಗದೀಶ್‌
ಚನ್ನಗಿರಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್.ಎನ್.ಜಗದೀಶ್ ಮತ್ತು ಉಪಾಧ್ಯಕ್ಷರಾಗಿ ಎಂ.ಬಿ.ಸಾಕಮ್ಮ ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಂಧ ಮಕ್ಕಳೊಂದಿಗೆ ಸಿದ್ಧರಾಮೇಶ್ವರ ಶ್ರೀಗಳ 40ನೆಯ ಜನ್ಮದಿನ ಸಂಭ್ರಮ
ಭೋವಿ ಗುರುಪೀಠದ ಇಮ್ಮಡಿ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಅವರ 40ನೇ ವರ್ಷದ ಹುಟ್ಟುಹಬ್ಬವನ್ನು ಇಲ್ಲಿನ ಹೊರವಲಯದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ ಅಂಧ ಮಕ್ಕಳಿಗೆ ಹಣ್ಣು, ಧಾನ್ಯ ನೀಡುವ ಮೂಲಕ ಆಚರಿಸಲಾಯಿತು.
ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗಕ್ಕೆ ಬನ್ನಿ
ದಶಕಗಳ ನಂತರ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನ ಜು.21 ಮತ್ತು 22ರಂದು ನಡೆಯಲಿದೆ. ರಂಭಾಪುರಿ, ಉಜ್ಜಯಿನಿ, ಕೇದಾರ, ಶ್ರೀಶೈಲ ಹಾಗೂ ಕಾಶಿ ಪೀಠಗಳ ಜಗದ್ಗುರು ಪಾಲ್ಗೊಳ್ಳುವರು ಎಂದು ವೀರಶೈವ ಲಿಂಗಾಯತ ಸಮಾಜದ ನಾಯಕ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಆರ್‌ಟಿಐ ಕಾಯ್ದೆ ದುರ್ಬಳಕೆ ತಡೆದು, ಕಿರುಕುಳ ತಪ್ಪಿಬೇಕು
ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತ, ಆರ್‌ಟಿಐ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿರುವ ಹಿನ್ನೆಲೆ ಅಂಥವರ ಆಸ್ತಿಯನ್ನು ತನಿಖೆಗೊಳಪಡಿಸಿ, ಕಪ್ಪುಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರಿಗೆ ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ನೇತೃತ್ವದಲ್ಲಿ ಮನವಿ ಅರ್ಪಿಸಲಾಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 563
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved