ಸತೀಶ ಪೂಜಾರಿ ಮತ್ತೆ ವಶ, ಹಲವರ ವಿಚಾರಣೆಛತ್ರಪತಿ ಶಿವಾಜಿ ಮಹಾರಾಜರ ವಿವಾದಿತ ಚಿತ್ರದ ಫ್ಲೆಕ್ಸ್ ತೆರವು ವೇಳೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಹಿಂದು ಜಾಗರಣಾ ವೇದಿಕೆ ಸತೀಶ ಪೂಜಾರಿ ಅವರನ್ನು ಶುಕ್ರವಾರ ರಾತ್ರಿ ವಶಕ್ಕೆ ಪಡೆದು, ತಡರಾತ್ರಿ ಪೊಲೀಸರು ಬಿಡುಗಡೆ ಮಾಡಿದ್ದರು. ಆದರೆ, ಮತ್ತೆ ಸತೀಶ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಎಲ್. ಶಿವಪ್ರಕಾಶ, ಮಾಜಿ ಮೇಯರ್ ಎಸ್.ಟಿ.ವೀರೇಶ, ಸಂಪತ್ ಅವರನ್ನು ಠಾಣೆಗೆ ಕರೆಸಿಕೊಂಡು, ಸ್ವಲ್ಪ ಹೊತ್ತಿನ ನಂತರ ಪೊಲೀಸರು ಬಿಟ್ಟು ಕಳಿಸಿದ್ದಾರೆ.