ಎಸ್ಸೆಸ್ ಮಲ್ಲಿಕಾರ್ಜುನಗೆ ಡಿಸಿಎಂ ಮಾಡಿ: ಎಸ್ಸೆಸ್ಸೆಂ ಅಭಿಮಾನಿ ಬಳಗರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಕಾಂಗ್ರೆಸ್ಸಿನ ಯುವ ನಾಯಕ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರ, 16 ಸಾವಿರಕ್ಕೂ ಅಧಿಕ ಆಶ್ರಯ ಮನೆ ನಿರ್ಮಿಸಿದ, ಮಧ್ಯ ಕರ್ನಾಟಕ ದಾವಣಗೆರೆಗೆ ಹೊಸ ರೂಪವನ್ನೇ ಕೊಟ್ಟ ಎಸ್.ಎಸ್.ಮಲ್ಲಿಕಾರ್ಜುನರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಎಸ್ಸೆಸ್ ಮಲ್ಲಿಕಾರ್ಜುನ್ ಅಭಿಮಾನಿ ಬಳಗ, ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.