ಜಾತಿ-ಧರ್ಮ ನೋಡದೇ ಕಠಿಣ ಕ್ರಮ ಕೈಗೊಳ್ಳಿ: ದಿನೇಶ ಶೆಟ್ಟಿಶಾಂತಿ, ಸಾಮರಸ್ಯ ಬೇರೂರಿರುವ ದಾವಣಗೆರೆಯಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ನಡೆದಿದೆ. ಜನರ ನೆಮ್ಮದಿಗೆ ಭಂಗ ತರುವವರು ಯಾವುದೇ ಜಾತಿ, ಧರ್ಮಕ್ಕೆ ಸೇರಿದವರಾಗಿದ್ದರೂ ಜಿಲ್ಲಾ ಪೊಲೀಸ್ ಇಲಾಖೆ ಹಿಂದೂ ಜಾಗರಣಾ ವೇದಿಕೆಯ ಸತೀಶ ಪೂಜಾರಿ ಗಡೀಪಾರಿಗೆ ಆದೇಶಿಸಿರುವಂತೆಯೇ ಮುಲಾಜಿಲ್ಲದೇ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಒತ್ತಾಯಿಸಿದ್ದಾರೆ.