ಬಾಲರಾಜ್ ಘಾಟ್ ವಸತಿ ಪ್ರದೇಶಕ್ಕೆ ನೆರೆತುಂಗ, ಭದ್ರಾ ನದಿಗಳ ಅಚ್ಚುಕಟ್ಟು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಶೃಂಗೇರಿ, ತೀರ್ಥಹಳ್ಳಿ ಮುಂತಾದ ಕಡೆಗಳಲ್ಲಿ ಕೆಲ ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಇದರಿಂದಾಗಿ ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿದೆ. ಭಾನುವಾರ ಇಡೀ ರಾತ್ರಿ ಮಳೆ ಬಂದ ಹಿನ್ನೆಲೆ ದಾವಣಗೆರೆ ಜಿಲ್ಲಾದ್ಯಂತ ಸೋಮವಾರ ಶಾಲಾ- ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಲಾಗಿತ್ತು.