ಜೆಡಿಯು ಸಂಘಟನೆಗೆ ರಾಜ್ಯಾದ್ಯಂತ ಸಂಚಾರರಾಜ್ಯದಲ್ಲಿ ತನ್ನದೇ ಆದ ವರ್ಚಸ್ಸು ಉಳಿಸಿಕೊಂಡಿರುವ ಜೆಡಿಯು ೨೦೨೬ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಡಾ. ಕೆ.ನಾಗರಾಜ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಎಲ್ಲರ ಮನಗೆದ್ದು ಎಂಎಲ್ಸಿ ಮಾಡಲು ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಂಘಟನೆ ಆರಂಭಿಸಿದ್ದೇವೆ ಎಂದು ಮಾಜಿ ಸಿಎಂ ಜೆ.ಎಚ್. ಪಟೇಲ್ ಪುತ್ರ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ಹೇಳಿದ್ದಾರೆ.