ಬ್ಯಾಂಕ್ಗಳಲ್ಲಿ ಭದ್ರತಾ ವ್ಯವಸ್ಥೆ ನಿರ್ಲಕ್ಷ್ಯವೇಕೆ?: ಎಸ್ಪಿ ಗರಂನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆಗೆ ಮುನ್ನವೇ ಭದ್ರತೆ ಬಗ್ಗೆ ಎಚ್ಚರಿಸಿದ್ದರೂ ನಿಮ್ಮ ನಿರ್ಲಕ್ಷ್ಯದಿಂದಾಗಿ ಪೊಲೀಸ್ ಇಲಾಖೆ ಸುಮಾರು 6 ತಿಂಗಳ ಕಾಲ ಹಗಲು-ರಾತ್ರಿ ಎನ್ನದೇ ಶ್ರಮವಿಸಿ, ಶಕ್ತಿ, ಸಂಪನ್ಮೂಲವನ್ನೆಲ್ಲಾ ಬಳಸಿ, ಪ್ರಕರಣ ಪತ್ತೆ ಹಚ್ಚಿದೆ. ಇಷ್ಟೆಲ್ಲಾ ಗೊತ್ತಿದ್ದರೂ ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳು ಬ್ಯಾಂಕ್ಗಳ ಸುರಕ್ಷತೆ, ಭದ್ರತೆ ಬಗ್ಗೆ ಹೆಚ್ಚಿನ ಗಮನಹರಿಸುತ್ತಿಲ್ಲ ಏಕೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಚಾಟಿ ಬೀಸಿದ್ದಾರೆ.