ಉಗ್ರರ ನೆಲೆಗಳ ಧ್ವಂಸಗೈದ ಸೇನೆ, ಮೋದಿ ಸರ್ಕಾರಕ್ಕೆ ಅಭಿನಂದನೆಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಭಾರತೀಯರ ಜೀವ ತೆಗೆದು, ವಿಕೃತಿ ಮೆರೆದಿದ್ದ ಭಯೋತ್ಪಾದಕರ 9 ನೆಲೆಗಳನ್ನೇ ಧ್ವಂಸಗೈಯ್ಯುವ ಮೂಲಕ ಭಾರತದ ಹೆಮ್ಮೆಯ ಸೈನಿಕರು ಪರಾಕ್ರಮ ಮೆರೆದಿದ್ದಾರೆ. ಇಂತಹ ದಿಟ್ಟ ನಿರ್ಧಾರ ಕೈಗೊಳ್ಳಲು ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವಾ ರಾಜನಾಥ್ ಸಿಂಗ್ ಅವರನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ದಾವಣಗೆರೆಯಲ್ಲಿ ಅಭಿನಂದಿಸಿದ್ದಾರೆ.