ಮಾಯಕೊಂಡ ಪರಿಶಿಷ್ಟ, ಹಿಂದುಳಿದ ರೈತರ ಒಕ್ಕಲೆಬ್ಬಿಸಬೇಡಿ: ಸಚಿವ ಈಶ್ವರ ಖಂಡ್ರೆಗೆ ಶಾಸಕ ಮನವಿಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಸುಮಾರು 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ಜಮೀನು ಉಳುಮೆ ಮಾಡಿಕೊಂಡು ಬಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಶಾಸಕ ಕೆ.ಎಸ್. ಬಸವಂತಪ್ಪ, ಬೆಂಗಳೂರಿನಲ್ಲಿ ಶನಿವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದರು.