• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿರಿಗೆರೆ ಶ್ರೀ ಪರ ರಕ್ತದಲ್ಲಿ ಸಹಿ ಮಾಡಿದ ಹೆಮ್ಮನಬೇತೂರು ಭಕ್ತಗಣ
ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳೇ ಶ್ರೀಪೀಠದಲ್ಲಿ ಮುಂದುವರಿಯುವಂತೆ ಒತ್ತಾಯಿಸಿ ತಾಲೂಕಿನ ಹೆಮ್ಮನಬೇತೂರು ಗ್ರಾಮದ ಶ್ರೀಮಠದ ಭಕ್ತರು ರಕ್ತದಲ್ಲಿ ಸಹಿ ಮಾಡುವ ಮೂಲಕ ಗುರುಗಳಿಗೆ ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದಾರೆ.
ಅಮ್ಮೆಂಬಳ ಸುಬ್ಬರಾವ್‌ ಪೈ ಆಶಯದಂತೆ ಕೆನರಾ ಬ್ಯಾಂಕ್‌ ಸಮಾಜ ಸೇವೆ: ಶಿವಪ್ರಸಾದ್‌
1906 ರಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಕೆನರಾ ಬ್ಯಾಂಕ್‌ ಸ್ಥಾಪಿಸಿದರು. ಈ ವೇಳೆ ಅವರು ಹೊಂದಿದ್ದ ದದ್ಯಾರ್ಥಿ ವೇತನ ವಿತರಣೆಯಂಥ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಕೆನರಾ ಬ್ಯಾಂಕ್ ಇಂದಿಗೂ ಮುಂದುವರಿಸುತ್ತಿದೆ. ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ವೈ.ವಿ.ಎನ್.ಶಿವಪ್ರಸಾದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಾಜಿ ಸಿಎಂ ಅರಸು ಮಹಾನ್‌ ಸಮಾಜ ಸುಧಾರಕ: ಡಾ.ಪ್ರಭಾ
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಪರಿವರ್ತನೆ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕರಾಗಿದ್ದವರು ಡಿ.ದೇವರಾಜು ಅರಸು. ಅವರು ಉಳುವವನಿಗೆ ಭೂ ಒಡೆತನ ನೀಡುವ ಕಾಯ್ದೆ ಸಮರ್ಪಕ ಜಾರಿಗೊಳಿಸುವಲ್ಲಿ ಶ್ರಮಿಸಿದರು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
೨೩ರಂದು ಗೋ ಬ್ಯಾಕ್ ಗವರ್ನರ್ ಬೃಹತ್‌ ಚಳವಳಿ
"ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ " ಎಂಬ ಎಚ್ಚರಿಕೆ ಸಂದೇಶ ಮುಂದಿಟ್ಟುಕೊಂಡು ಆಗಸ್ಟ್ 23ರಂದು ಬೆಳಗ್ಗೆ 11 ಗಂಟೆಗೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕು ಅಹಿಂದ ಒಕ್ಕೂಟ ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲ ಮುಖಂಡರು ಭಾಗವಹಿಸಬೇಕು ಎಂದು ಅವಳಿ ತಾಲೂಕು ಕುರುಬ ಸಮಾಜ ಅಧ್ಯಕ್ಷ ನೆಲಹೊನ್ನೆ ಮೋಹನ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಮಾಸಡಿ ಗ್ರಾಮ ಬಳಿ ಚಿರತೆ ಸೆರೆ: ಆತಂಕ ಶಮನ
ಹೊನ್ನಾಳಿ ತಾಲೂಕಿನ ಮಾಸಡಿ, ಅರಕರೆ ಸೇರಿದಂತೆ ಕೆಲ ಗ್ರಾಮಗಳ ಸರಹದ್ದಿನಲ್ಲಿ ಆತಂಕ ಮೂಡಿಸಿದ್ದ ಚಿರತೆ ಮಂಗಳವಾರ ಬೆಳಗಿನ ಜಾವ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ನಿವಾರಣೆಯಾಗಿದೆ.
ಸ್ವದೇಶಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಅಗತ್ಯ: ಸಂಸದೆ ಡಾ.ಪ್ರಭಾ
ಪ್ರಸ್ತುತ ಕೈಮಗ್ಗಕ್ಕೆ ಉತ್ತಮ ಬೇಡಿಕೆ ಇದ್ದು, ಸ್ವದೇಶಿ ಉತ್ಪನ್ನಗಳನ್ನು ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಮಾಡಬೇಕು. ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರಿಗೆ ಇಳಕಲ್ ಸೀರೆಯನ್ನು ನೀಡಿದ್ದೇನೆ. ಕೈಮಗ್ಗಕ್ಕೆ ಉತ್ತೇಜನ ನೀಡುವ ಕುರಿತು ಸಾಕಷ್ಟು ಆಲೋಚನೆಗಳಿದ್ದು, ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಮಹಿಳೆಯರಿಗೆ ತರಬೇತಿ ನೀಡಲು ಕ್ರಮ ವಹಿಸಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಟಿಬಿ ಡ್ಯಾಂ ರಕ್ಷಕ ಕನ್ನಯ್ಯ ನಾಯ್ದು ತಂಡಕ್ಕೆ ಸರ್ಕಾರ ಪ್ರಶಸ್ತಿ ಘೋಷಿಸಿ, ಗೌರವಿಸಲಿ
ಸತತ 3 ದಿನಗಳ ಭಗೀರಥ ಪ್ರಯತ್ನದಿಂದ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್‌ ದುರಸ್ತಿ ಕಾರ್ಯ ಯಶಸ್ವಿಗೊಳಿಸಿ, ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಕಲ್ಯಾಣ ಕರ್ನಾಟಕದ ಭಗೀರಥ ಎನಿಸಿದ್ದಾರೆ. ಇಂತಹ ಸಾಧಕರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಜೊತೆಗೆ ಹಗಲಿರುಳು ಶ್ರಮಿಸಿದ ಇಡೀ ಅಧಿಕಾರಿ, ಸಿಬ್ಬಂದಿ ಕಾರ್ಯವನ್ನು ಸರ್ಕಾರ ಗುರುತಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಆಗ್ರಹಿಸಿದ್ದಾರೆ.
ಸಾಮಾಜಿಕ ಪರಿವರ್ತನೆಗೆ ಉತ್ತಮ ನಾಯಕತ್ವ ಮುಖ್ಯ: ರೇವಣ್ಣ ನಾಯ್ಕ್
ಸಮಾಜದಲ್ಲಿ ಪರಿವರ್ತನೆ ಕಾಣಬೇಕಾದರೆ ಉತ್ತಮ ನಾಯಕತ್ವ ಎನ್ನುವುದು ಬಹಳ ಮುಖ್ಯ. ಅದನ್ನು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ತನ್ನ ಜೀವಿತಾವಧಿಯಲ್ಲಿ ಸಾಬೀತುಪಡಿಸಿದರು ಎಂದು ಮುಖ್ಯಶಿಕ್ಷಕ ಬಿ.ಬಿ. ರೇವಣ್ಣ ನಾಯ್ಕ್ ಅಭಿಪ್ರಾಯಪಟ್ಟರು.
ಮಹಾಪುರುಷರನ್ನು ಜಾತಿಗೆ ಸೀಮಿತಗೊಳಿಸೋದು ಸಲ್ಲದು: ಉತ್ತಮ
ದಾರ್ಶನಿಕರು, ಮಹಾಪುರುಷರನ್ನು ಒಂದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಅವರು ಮನುಕುಲದ ಉದ್ದಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಎಚ್‌.ಎಸ್‌.ರುದ್ರಪ್ಪ ಹೋರಾಟ ಜೀವನ ರೈತರಿಗೆ ಮಾದರಿ: ಶಾಸಕ ಶಾಂತನಗೌಡ
ಕರ್ನಾಟಕ ರಾಜ್ಯ ರೈತ ಸಂಘದ ಹುಟ್ಟಿಗೆ ಕಾರಣರಾದ ಮೊದಲ ಅಧ್ಯಕ್ಷ ಎಚ್.ಎಸ್. ರುದ್ರಪ್ಪನವರ ಆದರ್ಶಗಳನ್ನು ಅಳವಡಿಸಿಕೊಂಡು ಹೋದರೆ ಮಾತ್ರ ರೈತರ ಹೋರಾಟಕ್ಕೆ ನಿಜವಾದ ಅರ್ಥ ಬರುತ್ತದೆ. ಇತ್ತೀಚಿನ ದಿನಗಳಲ್ಲಿ ಬಂಡವಾಳಶಾಹಿಗಳ ಕೈ ಮೇಲಾಗಿದೆ. ರೈತರ ಬದುಕು ದುಸ್ತರವಾಗಿದೆ. ರುದ್ರಪ್ಪ ಪ್ರಾಮಾಣಿಕವಾಗಿ ರೈತಪರ ಕೆಲಸ ಮಾಡಿದವರು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 583
  • next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved