ಗುಣಮಟ್ಟದ ಕಾಮಗಾರಿ ನಡೆಯಲು ಗ್ರಾಮಸ್ಥರೂ ನಿಗಾ ವಹಿಸಲಿಗ್ರಾಮಸ್ಥರು ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ನಡೆಯುವ ರಸ್ತೆ, ಚರಂಡಿ ಮುಂತಾದ ಯಾವುದೇ ಸರ್ಕಾರಿ ಕಾಮಗಾರಿಗಳು ಕಳಪೆ ಆಗದಂತೆ ಗಮನಹರಿಸಿಬೇಕು. ಆಗ ಕಳಪೆ ಕಾಮಗಾರಿಗಳ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಸಾಮಾನ್ಯವಾಗಿ ಬಹುಪಾಲು ಜನರು ಇದು ಸರ್ಕಾರಿ ಕಾಮಗಾರಿ, ತಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವನೆ ತೋರುತ್ತಾರೆ. ಇದರಿಂದ ಕಾಮಗಾರಿಗಳು ಕಳಪೆಯಾಗುವ ಸಾಧ್ಯತೆ ಇರುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.