• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಸಹಾಯಕ ಎಂಜಿನಿಯರ್‌ಗಳ ನೇಮಕಾತಿ ಪರೀಕ್ಷೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್‌ಗಳ ಸಿವಿಲ್‌ ಹುದ್ದೆಗಳ ನೇಮಕಾತಿಗಾಗಿ ಆ.11ರಂದು ನಗರದ 3 ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.
ಸೆ.7ರಂದು ಹಿಂದೂ ಏಕತಾ ಗಣೇಶ ಪ್ರತಿಷ್ಠಾಪನೆ
ಪಟ್ಟಣದಲ್ಲಿ 8 ವರ್ಷಗಳಿಂದ ಹಿಂದೂ ಏಕತಾ ಗಣೇಶೋತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಅಂತೆಯೇ, ಸೆಪ್ಟೆಂಬರ್‌ನಲ್ಲಿ ಬರಲಿರುವ 9ನೇ ವರ್ಷದ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಗುರುವಾರ ಸಂಜೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಟ್ಟಣದ ಹಿಂದೂ ಸಮಾಜ ಬಾಂಧವರ ಪೂರ್ವಭಾವಿ ಸಭೆ ನಡೆಸಲಾಯಿತು.
ಓದಿನ ಜತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ಅಗತ್ಯ
ಓದಿನ ಜತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ನಾನು ಉಪನ್ಯಾಸಕ ಜೀವನದಲ್ಲಿ ಕಂಡು ಕೊಂಡ ವಾಸ್ತವಿಕ ಸತ್ಯ ಎಂದು ಚಿಗುರು ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಹಾಗೂ ಎಚ್. ಕಡದಕಟ್ಟೆ ಶ್ರೀ ವಿಜಯ ಪದವಿಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥ ಎಂ.ಕೆ. ನಾಗರಾಜ್ ಹೇಳಿದರು.
ಮಲೇಬೆನ್ನೂರು ವ್ಯಾಪ್ತಿ ವಿವಿಧೆಡೆ ಅದ್ಧೂರಿಯಾಗಿ ನಡೆದ ಕಾರ್ಣೀಕ
ಇಲ್ಲಿಗೆ ಸಮೀಪದ ಕೊಮಾರನಹಳ್ಳಿ ರಂಗನಾಥಸ್ವಾಮಿ ಕೆರೆ ಆವರಣದಲ್ಲಿ ಹರಳಹಳ್ಳಿ ಆಂಜನೇಯಸ್ವಾಮಿ ಕಾರ್ಣೀಕೋತ್ಸವವು ಅಪಾರ ಭಕ್ತರ ಸಮ್ಮುಖ ಅದ್ಧೂರಿಯಾಗಿ ಸಂಪನ್ನಗೊಂಡಿತು. "ಮುತ್ತಿನ ರಾಶಿಗೆ ಸರ್ಪ ಸುತ್ತಿತಲೇ, ಸರ್ಪಕ್ಕೆ ಹದ್ದು ಹಾಲು ಉಣಿಸಿತಲೇ, ಅನ್ನ ನೀರು ಸಂತೃಷ್ಠಿ " ಎಂದು ಕಾರ್ಣೀಕ ನುಡಿಯಲಾಗಿದೆ.
ಎಡ-ಬಲ ನಾಲೆಗಳಲ್ಲಿ ವೇಗವಿಲ್ಲದ ಭದ್ರಾ ಡ್ಯಾಂ ನೀರು : ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರುಹರಿಸಿ 11 ದಿನಗಳಾಗಿವೆ. ಆದರೂ, ನಾಲೆಗಳಲ್ಲಿ ನೀರು ನಿಗದಿತ ಪ್ರಮಾಣ ಹಾಗೂ ಹೆಚ್ಚು ರಭಸದಲ್ಲಿ ಹರಿಯುತ್ತಿಲ್ಲ. ಈ ಹಿನ್ನೆಲೆ  ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

ಬೇಡಿಕೆ ಈಡೇರಿಸಲು ಹರಿಹರ ತಾಲೂಕು ಶಿಕ್ಷಕರ ಸಂಘ ತಹಸೀಲ್ದಾರ್‌ಗೆ ಮನವಿ
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹರಿಹರ ತಾಲೂಕು ಘಟಕ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ತಹಸೀಲ್ದಾರ್ ಗುರು ಬಸವರಾಜ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.
ಬಡವರಿಗೆ ಉಚಿತ ಆಂಬ್ಯುಲೆನ್ಸ್‌ ಮಾದರಿ ಸೇವೆ
ಹೊನ್ನಾಳಿ ಪಟ್ಟಣದ ಸಮಾನ ಮನಸ್ಕ 16 ಮುಸ್ಲಿಂ ಯುವಕರು ಯೂನಿಟಿ ಚಾರಿಟೇಬಲ್ ಟ್ರಸ್ಟ್ ರಚಿಸಿಕೊಂಡಿದ್ದು, ಟ್ರಸ್ಟ್‌ ಮೂಲಕ ಕಡುಬಡವರಿಗೆ ಉಚಿತ ಆಂಬ್ಯುಲೆನ್ಸ್ ಮತ್ತು ಶವ ಸಂರಕ್ಷಣೆ ಪೆಟ್ಟಿಗೆ ಸೇವೆ ಒದಗಿಸಲು ಮುಂದಾಗಿದ್ದಾರೆ. ಇದು ಇತರರಿಗೂ ಮಾದರಿ ಜನಸೇವೆಯಾಗಿದೆ ಎಂದು ಮುಸ್ಲಿಂ ಸಮಾಜದ ಮೌಲ್ವಿ ಅಕೀಲ್ ರಾಜಾ ಹೇಳಿದರು.
ಕಮ್ಮಾರಗಟ್ಟೆ ಆಂಜನೇಯ ಕಾರ್ಣಿಕೋತ್ಸವ ಸಂಪನ್ನ
ಭಕ್ತಿ ಪರಂಪರೆಯ ಸಾಧ್ವಿ ಶ್ರೀ ಹೆಳವನಕಟ್ಟೆ ಗಿರಿಯಮ್ಮ ಪುಣ್ಯತಿಥಿ ಮತ್ತು ನಾಗರ ಪಂಚಮಿ ಪ್ರಯುಕ್ತ ಶುಕ್ರವಾರ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಕಾರ್ಣಿಕೋತ್ಸವ ಸಹಸ್ರಾರು ಭಕ್ತರ ಸಮ್ಮುಖ ನಡೆಯಿತು. ಆಂಜನೇಯ ಸ್ವಾಮಿ ವ್ರತನಿರತ ಗಣಮಗ ಅಂಬನ್ನೇರಿ "ಶಿಖರದ ತುದಿಗೆ ಘಟಸರ್ಪ ನುಂಗೀತಲೇ ಭೂಲೋಕ ಎಚ್ಚರ " ಎನ್ನುವ ಈ ವರ್ಷದ ಕಾರಣಿಕ ನುಡಿ ನುಡಿದರು.
ಮೂಲಸೌಕರ್ಯ ದಕ್ಕದೇ ಆದಿವಾಸಿಗಳ ಗೋಳು ಅರಣ್ಯರೋದನ
ಸ್ವಾತಂತ್ರ್ಯಪೂರ್ವದ ಬ್ರಿಟಿಷರ ಆಳ್ವಿಕೆ ಕಾನೂನುಗಳ ಆಧಾರದಲ್ಲೇ ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸುವ ಕೆಲಸ ಇಂದಿಗೂ ಮುಂದುವರಿದಿದೆ. ಇದರಿಂದಾಗಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಬುಡಕಟ್ಟು ಜನರು, ಆದಿವಾಸಿ ಜನರ ಅಭಿವೃದ್ಧಿ ಆಗುತ್ತಿಲ್ಲ, ಮೂಲಸೌಕರ್ಯಗಳೂ ದಕ್ಕುತ್ತಿಲ್ಲ ಎಂದು ವಿಧಾನ ಪರಿಷತ್ತು ಸದಸ್ಯ ಶಾಂತಾರಾಮ್ ಸಿದ್ಧಿ ದಾವಣಗೆರೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾಳೆ ಸಂಕರ್ಷಣ ನೃತ್ಯಾಲಯದ ಆಶ್ರಿತಾ ಎನ್. ರಂಗಪ್ರವೇಶ
ಹರಿಹರ ನಗರದ ಸಂಕರ್ಷಣ ನೃತ್ಯಾಲಯದ ಆಶ್ರಿತಾ ಎನ್. ರಂಗಪ್ರವೇಶ ಕಾರ್ಯಕ್ರಮ ಆ.೧೧ರಂದು ಆಯೋಜನೆ ಮಾಡಲಾಗಿದೆ. ಪ್ರತಿಭಾವಂತೆ ಆಶ್ರಿತಾ ನಗರದ ಪ್ರಸಿದ್ಧ ಅಡುಗೆ ಗುತ್ತಿಗೆದಾರ ನಾಗರಾಜ್ ಮತ್ತು ಅನಿತಾ ದಂಪತಿ ಪುತ್ರಿಯಾಗಿದ್ದಾರೆ ಎಂದು ಸಂಕರ್ಷಣ ನೃತ್ಯಾಲಯದ ಅಧ್ಯಕ್ಷೆ, ನೃತ್ಯಗುರು ವಿದುಷಿ ರಾಧಾ ಭಾಸ್ಕರ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 583
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved