ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.