• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕ ಸೌಲಭ್ಯಕ್ಕೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ
ಹೊನ್ನಾಳಿ, ಹೊನ್ನಾಳಿ ಮೂಲಕ ಶಿವಮೊಗ್ಗದ ಕಡೆಗೆ ಓಡಾಡುವ ಕೆಎಸ್ಆರ್ ಟಿಸಿ ಬಸ್ ಗಳ ಸಂಖ್ಯೆ ಹೆಚ್ಚಿಸುವ ಹಾಗೂ ದಾವಣಗೆರೆ, ಹರಿಹರ ಕಡೆಯಿಂದ ಶಿವಮೊಗ್ಗಕ್ಕೆ ಓಡಾಡುವ ನಾನ್ - ಸ್ಟಾಪ್ (ತಡೆ ರಹಿತ ) ಬಸ್ ಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಗುರುವಾರ ಬೆಳಗ್ಗೆ ಗೋವಿನ ಕೋವಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್‌ ಗಳನ್ನು ತಡೆದು ಪ್ರತಿಭಟನೆ ಮಾಡಿದರು.
ಥಾಯಲೆಂಡ್‌ನ ಮಾಸ್ಟರ್‌ ಗೇಮ್ಸ್‌ನಲ್ಲಿ ಬಹುಮಾನ
ನ್ಯಾಮತಿ: ಪಟ್ಟಣದ ಆಜಾದ್‌ ರಸ್ತೆಯಲ್ಲಿ ವಾಸವಾಗಿರುವ ಕಂಚುಗಾರನಹಳ್ಳಿ ಗುರುಶಾಂತಪ್ಪನವರು ಹೈದಾರಬಾದ್‌ನಲ್ಲಿ ನಡೆದ ಪಾನ್‌ ಇಂಡಿಯಾ ಮಾಸ್ಟರ್‌ ಗೇಮ್ಸ್‌ನಲ್ಲಿ ಎರಡನೇ ಸ್ಥಾನ ಲಭಿಸಿ, ಬಹುಮಾನ ಪಡೆದಿದ್ದಾರೆ.
ಮಣ್ಣು ಮುಕ್ಕಿದ ಬಿಜೆಪಿ: ಕಾರ್ಯಕರ್ತರಲ್ಲಿ ಇನ್ನಿಲ್ಲದ ಕಡುಬೇಸರ!
ಒಂದೂವರೆ ದಶಕದ ಹಿಂದೆ ತುಂಬಿದ ಮನೆಯಾಗಿ, ಅಧಿಕಾರದ ಸುವರ್ಣಯುಗ ಅನುಭವಿಸಿದ್ದ ಬಿಜೆಪಿ ಈಗ ಮನೆಯೊಂದು ಹಲವು ಬಾಗಿಲುಗಳು ಎಂಬಂತಾಗಿದೆ. ತನ್ನ ದುರ್ದಿನಗಳನ್ನು ತಾನೇ ತಂದುಕೊಂಡಿರುವುದು ಪಕ್ಷದ ಮುಖಂಡರ ಜಂಘಾಬಲವನ್ನೇ ಅಡಗಿಸಿದೆ. ಜಿಲ್ಲಾ ನಾಯಕರ ಶೀತಲಸಮರ, ಪರಸ್ಪರರಲ್ಲಿ ವಿಶ್ವಾಸ ಇಲ್ಲದ್ದು, ನನ್ನ ಅವಧಿ ಮುಗಿದಾಯ್ತಲ್ಲವೆಂಬ ಧೋರಣೆ, ನಮಗೆ ಅಧಿಕಾರ ಕೊಡಿಸಲಿಲ್ಲ ಎಂಬುದು, ಗೆಲ್ಲುವ ಕುದುರೆಗಳನ್ನೇ ಕಟ್ಟಿ ಹಾಕುವ ಹುಚ್ಚು ಸಾಹಸಕ್ಕೆ ಕೈ ಹಾಕಿದ ಹೈ ಕಮಾಂಡ್‌ನ ಅತಿಯಾದ ವಿಶ್ವಾಸ, ತಪ್ಪು ಲೆಕ್ಕಾಚಾರಗಳ ಪರಿಣಾಮ ದಾವಣಗೆರೆಯಂಥ ಭದ್ರಕೋಟೆ ಕಾಂಗ್ರೆಸ್ ಕೈ ವಶವಾಗಿದೆ ಎಂಬುದು ನೊಂದ ಕಾರ್ಯಕರ್ತರ ಮಾತು.
ಸರ್ಕಾರಿ ಜಾಗದಲ್ಲಿ ಸಸಿಗಳ ಬೆಳೆಸಲು ಯೋಜನೆ: ಡಿಸಿ ಡಾ.ವೆಂಕಟೇಶ್‌
ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮರಗಳ ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
ಬಾಲಕಾರ್ಮಿಕತೆ ನಿರ್ಮೂಲನೆ, ಪುನರ್ವಸತಿಗೆ ಆದ್ಯತೆ ನೀಡಿ
ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಯಿಂದ ಬಿಡುಗಡೆಗೊಳಿಸುವ ಜೊತೆಗೆ ಪುನರ್ವಸತಿ ಕಲ್ಪಿಸಲು ಒತ್ತು ನೀಡಬೇಕು. ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಬಗ್ಗೆ ಧ್ವನಿಸುರುಳಿ ಪ್ರಚಾರ ಮೂಲಕ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನಾ ಸೊಸೈಟಿ ಅಧ್ಯಕ್ಷ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪ್ರಕೃತಿ ಸಮತೋಲನ ಕಾಪಾಡಲು ವೃಕ್ಷಗಳ ಬೆಳೆಸಬೇಕು: ನ್ಯಾ.ವಿಶ್ವನಾಥ ಮೂಗತಿ ಸಲಹೆ
ಮರ-ಗಿಡಗಳು ಸಮೃದ್ಧಿಯಾಗಿದ್ದರೆ ಕಾಲಮಾನಕ್ಕೆ ತಕ್ಕಂತೆ ಮಳೆ-ಬೆಳೆಯಾಗಿ ಪ್ರಕೃತಿಯಲ್ಲಿ ಸಮತೋಲನ ಇರುವುದು ಎಂದು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಮರುಮೌಲ್ಯ ಮಾಪನ: ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮಾನ್ವಿತ
ಚನ್ನಗಿರಿ ಪಟ್ಟಣದ ನವಚೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಎಸ್. ಮಾನ್ವಿತ ಏಪ್ರಿಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶದಲ್ಲಿ 614 ಅಂಕ ಪಡೆದಿದ್ದರು. ಹಿಂದಿ ಪಠ್ಯ ವಿಷಯದಲ್ಲಿ 90 ಅಂಕ, ಸಮಾಜ ವಿಜ್ಞಾನದಲ್ಲಿ 99 ಅಂಕ ಪಡೆದಿದ್ದು, ಅಂಕಗಳು ಕಡಿಮೆ ಬಂದಿವೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದ್ದರು. ಈ ವೇಳೆ ಹಿಂದಿ ಪಠ್ಯ ವಿಷಯದಲ್ಲಿ ಹೆಚ್ಚುವರಿ 7 ಅಂಕಗಳು ಲಭ್ಯವಾಗಿ, ಒಟ್ಟು 97 ಅಂಕಗಳು ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಹೆಚ್ಚುವರಿಯಾಗಿ 1 ಅಂಕ ಲಭಿಸಿ, 100ಕ್ಕೆ 100 ಅಂಕ ಗಳಿಸಿದ್ದಾರೆ. ಒಟ್ಟು 625ಕ್ಕೆ 622 ಅಂಕಗಳ ಪಡೆದು ದಾವಣಗೆರೆ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯ ಮಟ್ಟದಲ್ಲಿ 4ನೇ ಸ್ಥಾನಕ್ಕೆ ಪಾತ್ರರಾಗಿದ್ದಾರೆ.
ಡಾ.ಪ್ರಭಾಗೆ ಶುಭಾಶಯ ಸುರಿಮಳೆ
ಎರಡೂವರೆ ದಶಕದಿಂದ ಕೈ ತಪ್ಪಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ಕೈವಶ ಮಾಡಿಕೊಳ್ಳುವ ಮೂಲಕ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಂಡ, ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಂಸದರಾದ ಮೊದಲ ದಿನ ಬೆಳಗ್ಗೆಯಿಂದ ರಾತ್ರಿವರೆಗೂ ಮನೆಗೆ ಬಂದವರ ಶುಭ ಹಾರೈಕೆಗಳ ಸಾಗರದಲ್ಲಿ ದಿನ ಕಳೆಯಬೇಕಾಯಿತು. ಲೋಕಸಭಾ ಕ್ಷೇತ್ರ ಫಲಿತಾಂಶದಲ್ಲಿ ಎಲ್ಲ 19 ಸುತ್ತುಗಳಲ್ಲೂ ಬಹುತೇಕ ತಾವೇ ಮೇಲುಗೈ ಸಾಧಿಸಿ, ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ. ಇಡೀ ಕಾಂಗ್ರೆಸ್ ಪಾಳೆಯದಲ್ಲೇ ಮಿಂಚಿನ ಸಂಚಾರ ತಂದ ಡಾ.ಪ್ರಭಾ ಮಲ್ಲಿಕಾರ್ಜುನ ಈಗ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದ್ದಾರೆ.
ನಾಡಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಧನೆ ಅಮೋಘ
ಕನ್ನಡ ನಾಡಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕೆಆರ್‌ಎಸ್ ಅಣೆಕಟ್ಟು, ವಾಣಿ ವಿಲಾಸ ಸಾಗರ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಬ್ಯಾಂಕ್, ಮೈಸೂರು ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ಮೆಡಿಕಲ್ ಕಾಲೇಜು, ನಿಮ್ಹಾನ್ಸ್ ಆಸ್ಪತ್ರೆ, ಮಿಂಟೋ ಆಸ್ಪತ್ರೆ ಮೊದಲಾದ ಹಲವಾರು ಶಾಶ್ವತ ಯೋಜನೆಗಳನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕನ್ನಡಿಗರಿಗೆ ಪ್ರಾತಃಸ್ಮರಣೀಯರು ಎಂದು ಕೆ.ರಾಘವೇಂದ್ರ ನಾಯರಿ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಬಳುವಳಿ ನೀಡಿ
ಹಣ, ಆಸ್ತಿ, ಸಂಪತ್ತು, ಚಿನ್ನಾಭರಣ ಸೇರಿದಂತೆ ಜೀವನಕ್ಕೆ ಅತ್ಯವಶ್ಯಕ ವಸ್ತುಗಳನ್ನು ಸಂಗ್ರಹಿಸಿಡುವಂತೆ ನಮ್ಮ ಹಾಗೂ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕೊಡುಗೆಯಾಗಿ ಉಳಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್‌. ಹೆಗಡೆ ಹೇಳಿದ್ದಾರೆ.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved