ಇಂದೇ ಸಭೆ, ರ್ಯಾಲಿ ನಡೆಸಿ ಪಕ್ಷೇತರನಾಗಿ ನಾಮಪತ್ರದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏ.18ರ ಬದಲಿಗೆ, ಏ.17ರಂದೇ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ, ದರ್ಗಾದಲ್ಲಿ ಹೊದಿಕೆ ಅರ್ಪಿಸಿ, ಬಹಿರಂಗ ಸಭೆ ನಡೆಸಲಿದ್ದೇವೆ. ಅನಂತರ ಬೃಹತ್ ರ್ಯಾಲಿಯಲ್ಲಿ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಪಕ್ಷೇತರ ಅಭ್ಯರ್ಥಿ, ಇನ್ಸೈಟ್ಸ್ ಅಕಾಡೆಮಿ ಸಂಸ್ಥಾಪಕ ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.