ಶಿಕ್ಷಕರ ವಿರುದ್ಧ ಆಧಾರರಹಿತ ದೂರು ಖಂಡಿಸಿ ಪ್ರತಿಭಟನೆಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆ (ಎಸ್ಡಿಎಂಸಿ ಸಂಘ) ಹೆಸರಿನಲ್ಲಿ ಎ.ಎಸ್. ಶಿವಲಿಂಗಪ್ಪ ಅವರು ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳ ಇಡೀ ಶಿಕ್ಷಕ ಸಮುದಾಯಗಳ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸೆ.8ರಂದು ಆಧಾರರಹಿತ ದೂರು ನೀಡಿದ್ದಾರೆಂದು ಆರೋಪಿಸಿ, ತಾಲೂಕು ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಗಳ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ. ಶಾಲಾ ಶಿಕ್ಷಣ ಇಲಾಖೆಯ ಬಿ.ಆರ್.ಸಿ. ಹಾಗೂ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.