ಚನ್ನಗಿರಿ ಸಿಪಿಐ ವಿರುದ್ಧ ಕಾನೂನು ಹೋರಾಟ: ರಘುಇಡೀ ಗ್ರಾಮ, ತೋಟ, ಗದ್ದೆಗಳನ್ನೇ ಜಲಾವೃತಗೊಳಿಸುವ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಪ್ರಶ್ನಿಸಿದ ಮಹಿಳೆಯರು ಸೇರಿ ಗ್ರಾಮಸ್ಥರ ಮೇಲೆ ದೌರ್ಜನ್ಯ ಮಾಡಿ, ಕೇಸ್ ದಾಖಲಿಸಿದ್ದಲ್ಲದೇ ಅಟ್ರಾಸಿಟಿ ಕೇಸ್ ಹಾಕುವ ಬೆದರಿಕೆ ಹಾಕಿದ ಚನ್ನಗಿರಿ ವೃತ್ತ ನಿರೀಕ್ಷಕ ರವೀಶ್ ವಿರುದ್ಧ ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗದ ಜತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಚನ್ನಗಿರಿ ತಾ. ಹೊನ್ನೆಮರದಹಳ್ಳಿ ಹಾಗೂ ಬೊಮ್ಮೇನಹಳ್ಳಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.