• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚಮಸಾಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ವಚನಾನಂದ ಶ್ರೀ
ಸಮಾಜ ಬಂಧುಗಳು ತಮ್ಮ ಕುಟುಂಬ, ಮನೆಗಳಲ್ಲಿ ಶುಭ ಕಾರ್ಯ ಮಾಡಿದಾಗ ಆಹ್ವಾನ ಪತ್ರಿಕೆಯಲ್ಲಿ ಹರ ಲಾಂಛನ ಕಡ್ಡಾಯವಾಗಿ ಹಾಕಿಸಿ, ಶ್ರೀಮಠವನ್ನು ಆರ್ಥಿಕವಾಗಿ, ಸಶಕ್ತವಾಗಿ ಬೆಳೆಸಬೇಕಾಗಿದೆ. ಈಗ ಶ್ರೀಪೀಠದಲ್ಲಿ 48 ಬಡ ವಿದ್ಯಾರ್ಥಿಗಳು ಆಶ್ರಯ ಪಡೆದು, ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ಸಾವಿರ ಸಂಖ್ಯೆಯನ್ನು ದಾಟಬೇಕೆಂಬುದು ನಮ್ಮ ಕನಸಾಗಿದೆ. ಈ ನಿಟ್ಟಿನಲ್ಲಿ ಭಕ್ತರೂ ಇಂತಹ ಕಾರ್ಯಕ್ಕೆ ಕೈಜೋಡಿಸಬೇಕು.
ಸಾಸ್ವೇಹಳ್ಳಿ ಏತ ನೀರಾವರಿ: 3 ತಿಂಗಳಲ್ಲಿ ಪೂರ್ಣಗೊಳಿಸಿ: ಬಿ.ಆರ್.ರಘು
ಇನ್ನು 3 ತಿಂಗಳ ಒಳಗಾಗಿ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಿ, ನೀರು ಹರಿಸದಿದ್ದರೆ ಚನ್ನಗಿರಿ ತಾಲೂಕು ಕಸಬಾ ಹೋಬಳಿ, ಸಂತೇಬೆನ್ನೂರು ಹೋಬಳಿ, ಬಸವಾಪಟ್ಟಣ ಹೋಬಳಿ, ಸಾಸ್ವೇಹಳ್ಳಿ ಹೋಬಳಿ ರೈತರು ಚುನಾವಣೆ ಬಹಿಷ್ಕರಿಸುವ ನಿರ್ಧಾರ ಮಾಡಿದ್ದೇವೆ. ಯೋಜನೆಯಡಿ ಚನ್ನಗಿರಿ ತಾಲೂಕಿನ 120 ಕೆರೆ, ಹೊನ್ನಾಳಿ ತಾಲೂಕಿನ 4 ಕೆರೆ, ಶಿವಮೊಗ್ಗ ಜಿಲ್ಲೆಯ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.
ದಾವಣಗೆರೆ ಅರ್ಬನ್ ಬ್ಯಾಂಕ್‌: ಬಿರುಸಿನ ಮತದಾನ
ದಿ ದಾವಣಗೆರೆ ಅರ್ಬನ್ ಬ್ಯಾಂಕ್ ಚುನಾವಣೆಗೆ ಒಟ್ಟು 12,203 ಮತದಾರರಿದ್ದು, ಈ ಪೈಕಿ 5263 ಮತದಾರರು ತಮ್ಮ ಮತ ಚಲಾಯಿಸಿದರು. ಚುನಾವಣೆಗಾಗಿ 10 ಜನರ ಗುಂಪುಗಳ ತಂಡ, ವೈಯಕ್ತಿಕವಾಗಿ ಸ್ಪರ್ಧೆ ಮಾಡಿದವರು, 2-3 ಅಭ್ಯರ್ಥಿಗಳ ಗುಂಪಿನಲ್ಲಿ ಸ್ಪರ್ಧಿಗಳು ಅಂತಿಮ ಕಣದಲ್ಲಿದ್ದು, ಭಾನುವಾರ ಮತ ಚಲಾಯಿಸಿದ 5263 ಮತದಾರರು ಬ್ಯಾಂಕ್‌ಗೆ ನೂತನ ನಿರ್ದೇಶಕರ ಆಯ್ಕೆಗೆ ಅಂತಿಮ ಮುದ್ರೆ ಒತ್ತಿದ್ದಾರೆ.
ಮನೆ ಬಾಗಿಲಿಗೆ ಪಾಲಿಕೆಯಿಂದ ಇ-ಆಸ್ತಿ ಪತ್ರ ಅಭಿಯಾನ
ಫೆ.13ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ವಿನೋಬ ನಗರದ 3ನೇ ಮುಖ್ಯ ರಸ್ತೆಯಲ್ಲಿರುವ ವಾರ್ಡ್ ಆಫೀಸ್ ನಲ್ಲಿ ಮನೆ ಮಾಲೀಕರಿಗೆ ಸ್ಥಳದಲ್ಲೇ ಇ-ಆಸ್ತಿ ಪತ್ರ ನೀಡಲಾಗುವುದು. ಈಗಾಗಲೇ ವಾರ್ಡಿನ ಕಸ ವಿಲೇವಾರಿ ವಾಹನದ ಮೂಲಕ ಸಾರ್ವಜನಿಕರು, ಮನೆ ಮಾಲೀಕರಿಗೆ ಇ-ಆಸ್ತಿ ಮಾಡಿಸುವ ಕುರಿತು ಪ್ರಚಾರ ಮಾಡಲಾಗುತ್ತಿದೆ.
ನಾಳೆಯಿಂದ ಸೂರಗೊಂಡನಕೊಪ್ಪ ಸಂತ ಸೇವಾಲಾಲ್‌ ಜಯಂತಿ: ರಾಘವೇಂದ್ರ ನಾಯ್ಕ
14ರಂದು ಪೂರ್ಣಕುಂಭ ಮೆರವಣಿಗೆ, ಮಾತಾ ಮರಿಯಮ್ಮ ದೇವಿಗೆ ಅಭಿಷೇಕ, ಅಲಂಕಾರ, ಸಂತ ಸೇವಾಲಾಲ್‌ ಮೂರ್ತಿಗೆ ಅಭಿಷೇಕ, ಅಲಂಕಾರ, ಉಭಯ ದೇವಸ್ಥಾನಗಳಲ್ಲಿ ವಾಜಾ ಭಜನ್‌, ಸಮುದಾಯದ ಸಾಮೂಹಿಕ ಪ್ರಾರ್ಥನೆ, ಆಗಮಿತ ಮಾಲಾಧಾರಿಗಳಿಗೆ ದರ್ಶನ ಹಾಗೂ ಸೇವಾ ಸಂದೇಶ, ಮಹಾ ಮಂಗಳಾರತಿ, ಉತ್ಸವ ಮೂರ್ತಿಯ ಪ್ರತಿಷ್ಟಾಪನೆಯೊಂದಿಗೆ ಪಲ್ಲಕ್ಕಿ ಉತ್ಸವ, ನಿರಂತರವಾಗಿ ಮಾಲಾಧಾರಿಗಳಿಂದ ಮಾಲೆ ಇರುಮುಡಿಗಳ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.
ನಿವೇಶನ ಕೊಡದಿದ್ರೆ ವಿಷ ಕುಡಿತೀವಿ; ಎಚ್ಚರಿಕೆ
ಇನಾಂ ಜಮೀನಿಗೆ ಹೊಂದಿದ ಮಹಿಳೆಯೊಬ್ಬರಿಗೆ ಸೇರಿದ 2.16 ಎಕರೆ ಭೂಮಿ ಇದೆ. ಅದನ್ನು ನಾವ್ಯಾರೂ ಕೇಳುತ್ತಿಲ್ಲ. ಪಕ್ಕದ ಸರ್ಕಾರಿ ಜಮೀನಿನಲ್ಲಿ ನಿವೇಶನ ಕೇಳುತ್ತಿದ್ದಾರೆ. ಈ ಮಹಿಳೆ ಹಾಗೂ ದಲಿತ ಸಂಘಟನೆ ರಾಜ್ಯಾಧ್ಯಕ್ಷ ಎಂಬ ವ್ಯಕ್ತಿ ಸೇರಿ ದಲಿತ ಬಡ ಕುಟುಂಬಗಳ ನ್ಯಾಯಸಮ್ಮತ, ಪ್ರಜಾಸತ್ತಾತ್ಮಕ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ.
ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆ ಬ್ರಹ್ಮಾಸ್ತ್ರ: ಹೇಮಂತ ನಾಗರಾಜ
ಭ್ರಷ್ಟಾಚಾರದಿಂದ ಕೂಡಿರುವ ಸಮಾಜದಲ್ಲಿ ಸರ್ಕಾರಿ ಕೆಲಸ, ಕಾರ್ಯಗಳು ಯಾವ ರೀತಿ ಆಗುತ್ತಿವೆ, ಸರ್ಕಾರದಿಂದ ಮಂಜೂರಾದ ಅನುದಾನ ಸದ್ಭಳಕೆಯಾಗುತ್ತಿದೆಯೇ ಇಲ್ಲವೇ, ಸಾರ್ವಜನಿಕರ ತೆರಿಗೆ ಹಣ ಯಾರ ಪಾಲಾಗುತ್ತಿದೆ ಹೀಗೆ ಎಲ್ಲಾ ಹಗರಣ, ಭ್ರಷ್ಟಾಚಾರ, ಅನ್ಯಾಯವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆಯು ಪರಿಣಾಮಕಾರಿಯಾಗಿದೆ. ಇಂತಹ ಕಾಯ್ದೆ ಸದ್ಭಳಕೆಯಾದಾಗ ಮಾತ್ರ ಕಾಯ್ದೆ ಜಾರಿಗೊಳಿಸಿದ್ದೂ ಸಾರ್ಥಕವಾಗುತ್ತದೆ.
ಕುಣಿಬೆಳಕೆರೆ, ಮುದಹದಡಿ ಗ್ರಾಪಂಗೆ ಕೆಎಚ್‌ಪಿಟಿ ರಾಜ್ಯ ತಂಡ ಭೇಟಿ
ಕುಣೆಬೆಳಕೆರೆ ಗ್ರಾಮ ಪಂಚಾಯತ್ ಕಾರ್ಯಪಡೆ ವತಿಯಿಂದ ಎರಡು ವರ್ಷಗಳಿಂದ ಗ್ರಾಮ ಆರೋಗ್ಯ ಕಾರ್ಯಕ್ರಮ ಆಯೋಜನೆ ಹಾಗೂ ಯಶಸ್ವಿಗೊಳಿಸಿ ಬಂದಿರುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಾಹಿತಿ ನೀಡಿದರು. ಸಿಬ್ಬಂದಿ ಮಂಜಪ್ಪ, ಗ್ರಾಮ ಪಂಚಾಯತ್ ಕಾರ್ಯಪಡೆ ಸಮಿತಿ ವತಿಯಿಂದ ಗ್ರಾಮ ಆರೋಗ್ಯ ಕಾರ್ಯಕ್ರಮ ಕುರಿತು ನಿರ್ವಹಿಸುತ್ತಿರುವ ದಾಖಲೀಕರಣ ಕುರಿತಾಗಿ, 2.0 ದಾಖಲು ಮಾಡುತ್ತಿರುವ ಕುರಿತು ಮಾಹಿತಿ ನೀಡಿದರು.
ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ: ಶಾಸಕ ಬಸವಂತಪ್ಪ
ಸಮಾಜದ ಕಳಕಳಿ ಹೊಂದಿರುವ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಮೀಸಲಾತಿಯಿಂದ ವಂಚಿತರಾದ ಮಕ್ಕಳಿಗೆ ಮೀಸಲಾತಿ ಸಿಗಬೇಕೆಂದು ಬೆಂಗಳೂರಿಗೆ ಪಾದಯಾತ್ರೆ ಮಾಡಿ ಮಳೆ, ಚಳಿ, ಬಿಸಿಲು ಎನ್ನದೆ ಸುದೀರ್ಘ 258 ದಿನಗಳ ಕಾಲ ಧರಣಿ ಸತ್ಯಾಗ್ರಹ ಮಾಡಿ ಸರ್ಕಾರವನ್ನೇ ಅವರ ಬಳಿ ಕರೆಸಿಕೊಂಡು ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾದ ಶ್ರೀಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.
ನಾಳೆ ಹನುಮಂತ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ
ಫೆ.12ರಂದು ಮರದಲ್ಲಿ ಕೆತ್ತಿಸಿ ನೂತನ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದು ತಿಳಿಸಿದರು.ಭಾನುವಾರ ರಾತ್ರಿ 8ರಿಂದ ನೂತನ ಮೂರ್ತಿಗೆ ಶಿವಮೊಗ್ಗದ ಮಹೇಶ್ ಭಟ್ ರಿಂದ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಲಿವೆ. ಮರುದಿನ ಸೋಮವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಮರದಲ್ಲಿ ಕೆತ್ತಿದ ಹನುಮಂತ ದೇವರ ನೂತನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಲಿದೆ.
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 565
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved