• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಟಿಕೆಟ್ ವಂಚಿತ ವಿನಯಕುಮಾರ್‌ ನಾಮಪತ್ರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೈ ತಪ್ಪಿದ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ, ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ದಾವಣಗೆರೆ ಡಿಸಿ ಅವರಿಗೆ ಸಲ್ಲಿಸಿದರು.
ಕಾಂಗ್ರೆಸ್ ತೆಕ್ಕೆಗೆ ಬಿಜೆಪಿ ಮಾಜಿ ಶಾಸಕ ಗುರುಸಿದ್ದನಗೌಡ
ಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ತಮ್ಮ ಪುತ್ರ , ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ ಸೇರಿದಂತೆ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.
ಮತ ಹಕ್ಕು ತಪ್ಪದೇ ಚಲಾಯಿಸಿ: ಎಸ್‌ಪಿ ಮನವಿ
ಮುಂಬರುವ ಮೇ 7ನೇ ತಾರೀಖಿನಂದು ನಡೆಯಲಿರುವ ಚುನಾವಣೆಯಲ್ಲಿ ಎಲ್ಲ ನಾಗರಿಕ ಬಂಧುಗಳು ಮತ ಹಾಕುವುದರ ಮೂಲಕ ಹಕ್ಕನ್ನು ಚಲಾಯಿಸಬೇಕು. ಯಾವುದೇ ಆಮಿಷಗಳಿಗೂ ಒಳಗಾಗದಂತೆ ಧೈರ್ಯವಾಗಿ ಸೂಕ್ತವಾದ ವ್ಯಕ್ತಿಗೆ ಮತ ನೀಡಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಶಾಮನೂರು ಕಟ್ಟಾ ಅನುಯಾಯಿ ಬಿಜೆಪಿ ತೆಕ್ಕೆಗೆ

ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ ಕಟ್ಟಾ ಅನುಯಾಯಿ ಬಿಜೆಪಿ ಸೇರ್ಪಡೆ ಆಗುವುದರೊಂದಿಗೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದಾರೆ.

ಗಾಯತ್ರಿ ಬಗ್ಗೆ ಎಸ್‌ಎಸ್‌ ಹೇಳಿಕೆ ಖಂಡನೀಯ
ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಿತ್ಯವೂ ಮನೆಯಲ್ಲಿ 30 ಹಸುಗಳ ಆರೈಕೆ ಮಾಡಿ, ತುಂಬಿದ ಮನೆಯ ನಿರ್ವಹಣೆ ಮಾಡುವ ಮೂಲಕ ಜನಸೇವೆಗೂ ಮುಂದಾಗಿದ್ದಾರೆ. ಇಂತಹವರ ಬಗ್ಗೆ ಕಾಂಗ್ರೆಸ್ಸಿನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಅಡುಗೆ ಮಾಡಲು ಲಾಯಕ್ಕು ಎಂಬ ಹೇಳಿಕೆ ನೀಡಿದ್ದು ಖಂಡನೀಯ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ದಾವಣಗೆರೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಡಿಸಿಎಂ ಟೌನ್‌ಶಿಪ್‌, ಶಿರಮಗೊಂಡನಹಳ್ಳಿ ಬಳಿ ಅವೈಜ್ಞಾನಿಕ ಕೆಳಸೇತುವೆ ಕಾಂಗ್ರೆಸ್‌ ಬಳುವಳಿ
ಯುಪಿಎ ಸರ್ಕಾರದಲ್ಲಿ ಕೆ.ಎಸ್. ಮುನಿಯಪ್ಪ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವರಿದ್ದಾಗ ನಗರದ ಡಿಸಿಎಂ ಟೌನ್ ಶಿಪ್‌ ರೈಲ್ವೆ ಕೆಳಸೇತುವೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಆದರೂ ಈ ಕೆಳಸೇತುವೆ ಬಗ್ಗೆ ಕಾಂಗ್ರೆಸ್ಸಿನ ಮುಖಂಡರೇ ಆರೋಪಿಸುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರು, ಮಾಜಿ ಮೇಯರ್ ಡಿ.ಎಸ್. ಉಮಾ ಪ್ರಕಾಶ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
ಹಳ್ಳಿಗಳಿಗೆ ಅಭ್ಯರ್ಥಿಗಳ ಪ್ರವೇಶ ನಿರ್ಬಂಧಿಸಿ
ತೀವ್ರ ಬರದ ಸಂಕಷ್ಟ ಕಾಡುತ್ತಿದ್ದರೂ ಬರ ಪರಿಹಾರ ನೀಡದ ರಾಜಕೀಯ ಪಕ್ಷಗಳು ಚುನಾವಣೆ ಗುಂಗಿನಲ್ಲೇ ತೇಲಾಡುತ್ತಿವೆ. ಇಂತಹ ಪಕ್ಷಗಳ ಅಭ್ಯರ್ಥಿಗಳ ಹಳ್ಳಿಗಳ ಪ್ರವೇಶಕ್ಕೆ ನಿರ್ಬಂಧಿಸಿ, ಎಚ್ಚರಿಕೆ ಸಂದೇಶ ನೀಡುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸರ್ಕಾರಿ ಬಸ್, ಓಮ್ನಿ ಡಿಕ್ಕಿ: ಮೂವರ ಸಾವು
ನ್ಯಾಮತಿ ತಾಲೂಕು ವ್ಯಾಪ್ತಿಯ ಚಿನ್ನಿಕಟ್ಟೆ ಗ್ರಾಮದ ಬಳಿ ಶಿವಮೊಗ್ಗ- ಶಿಕಾರಿಪುರ ರಸ್ತೆಯಲ್ಲಿ ಗುರುವಾರ ಕೆಎಸ್‍ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂರು ಸಾವು ಕಂಡು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಂಜಾನ್ ಉಪವಾಸ ಅಂತ್ಯ: ಸಾಮೂಹಿಕ ಪ್ರಾರ್ಥನೆ
ಮುಸ್ಲಿಂ ಧರ್ಮೀಯರ ಪವಿತ್ರ ಹಬ್ಬ ಈದ್ ಉಲ್ ಫಿತ್ರ್‌ ಅನ್ನು ನಗರ, ಸೇರಿದಂತೆ ದಾವಣಗೆರೆ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಮುಸ್ಲಿಮರು ಆಚರಿಸಿದರು. ರಂಜಾನ್ ಅಂಗವಾಗಿ ಕಳೆದೊಂದು ತಿಂಗಳಿನಿಂದಲೂ ಉಪವಾಸ ಆಚರಿಸಿದ ಮುಸ್ಲಿಮರು ಗುರುವಾರ ಮಸೀದಿಗಳು, ಕಬರಸ್ಥಾನಗಳಲ್ಲಿ ಮಕ್ಕಳು, ಯುವಕರು, ಪುರುಷರು, ವಯೋವೃದ್ಧರೆನ್ನದೇ, ಹೊಸ ವಸ್ತ್ರಧಾರಿಗಳಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶುಭಾಶಯ ವಿನಿಮಯ ಮಾಡಿಕೊಂಡರು.
ನೀತಿ ಸಂಹಿತೆ ದೂರಿಗೆ ಸ್ಪಂದಿಸದ ಡಿಸಿ, ಆಯುಕ್ತೆ, ಉಪ ಆಯುಕ್ತೆ ವರ್ಗಾಯಿಸಬೇಕು
ರಂಜಾನ್ ಹಬ್ಬಕ್ಕೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ದಿನಸಿ ಸಾಮಗ್ರಿ ವಿತರಿಸುವುದೂ ಸೇರಿದಂತೆ ಕಾಂಗ್ರೆಸ್ಸಿನವರು ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಐದು ವಿವಿಧ ಪ್ರಕರಣಗಳ ಬಗ್ಗೆ ದೂರು ನೀಡಿದರೂ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಹಾಗೂ ಉಪ ಆಯುಕ್ತರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿನ್ನೆಲೆ ಅವರನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ಬಿಜೆಪಿ ಕಾನೂನು ಪ್ರಕೋಷ್ಟ ಬುಧವಾರ ಒತ್ತಾಯಿಸಿತು.
  • < previous
  • 1
  • ...
  • 538
  • 539
  • 540
  • 541
  • 542
  • 543
  • 544
  • 545
  • 546
  • ...
  • 637
  • next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved