ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಜ. 26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೂಚಿಸಿದರು.

ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಡಿಸಿ ಎನ್.ಎಂ.ನಾಗರಾಜ್

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಜಿಲ್ಲಾಡಳಿತದಿಂದ ಜ. 26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗಣರಾಜ್ಯೋತ್ಸವವನ್ನು ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸುವರು. ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾ ರೋಹಣ ನೆರವೇರಿಸಿ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ಮೈದಾನ ಸ್ವಚ್ಛತೆ, ಕಚೇರಿಗಳಲ್ಲಿ ಹಾಗೂ ನಗರದ ದೀಪಾ ಲಂಕಾರ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.ಧ್ವಜಾರೋಹಣ ಪ್ರಯುಕ್ತ ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯ ಕ್ರಮಗಳು ಹಾಗೂ ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ಅಗತ್ಯ ಸಿದ್ದತೆಗಳನ್ನು ಮಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ ಸೇರಿದಂತೆ ಕವಾಯತು ತಂಡಗಳ ಪಥ ಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಫಲಪುಷ್ಪ ಪ್ರದರ್ಶನವನ್ನು ನಗರದ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯ ವೇದಿಕೆ ಕಾರ್ಯಕ್ರಮದ ನಂತರ ಫಲಪುಷ್ಪ ಪ್ರದರ್ಶನದ ಉದ್ಘಾಟನೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಸಹ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿಯೇ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕ ರಡ್ಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ದಲಿತ ಸಂಘಟನೆ ಮುಖಂಡ ಕೆ.ಟಿ.ರಾಧಾಕೃಷ್ಣ, ಜಿ.ಪಂ. ಉಪ ಕಾರ್ಯದರ್ಶಿ ಶಂಕರ ಕೊರವರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಡಾ.ಮಂಜುಳ ಹುಲ್ಲಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ ಬಾಬು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. 8 ಕೆಸಿಕೆಎಂ 2ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಎನ್.ಎಂ. ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.