Published : Oct 14 2023, 01:01 AM IST| Updated : Oct 14 2023, 01:02 AM IST
Share this Article
FB
TW
Linkdin
Whatsapp
ಪೊಟೊ-13 ಕೆ ಎನ್ ಎಲ್ ಎಮ್ 1- ನೆಲಮಂಗಲ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಿ ಎಸ್ ಸಿ ವಿ ಎಲ್ ಇ ಟ್ರಸ್ಟ್ನಿಂದ ನೂತನ ಟ್ರಸ್ಟ್ ಉದ್ಘಾಟನಾ ಸಮಾರಂಭದ ಪ್ರಯುಕ್ತ ಆಯೋಜಿಸಿದ್ದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಹಾಗೂ ಇ-ಶ್ರಮ್ ಯೋಜನೆಯ ಉಚಿತ ನೊಂದಣಿ ಕಾರ್ಯವನ್ನು ರಾಜ್ಯ ವ್ಯವಸ್ಥಾಪಕ ಶೈಲೇಂದರ್ ಉದ್ಘಾಟಿಸಿದರು ಸಿಎಸ್ಸಿ ಟ್ರಸ್ಟ್ ಗೌರವಾಧ್ಯಕ್ಷ ಮಾಜಿ ಪುರಸಭೆ ಅಧ್ಯಕ್ಷ ಆರ್ ಉಮಾಶಂಕರ ಟ್ರಸ್ಟ್ ಅಧ್ಯಕ್ಷರಾದ ವೀಣಾ. ಟ್ರಸ್ಟ್ ಪ್ರಧಾನ ವಿಕ್ರಂ ಕಾರ್ಯದರ್ಶಿತಾಲೂಕು ಕಾರ್ಮಿಕ ನಿರೀಕ್ಷಕ ದನಪಾಲ್ನಾಯಕ್ ತಾಲೂಕಿನ ಎಲ್ಲಾ ಸಿ ಎಸ್ ಸಿ ವಿ ಎಲ್ ಇ ಗಳು ಮತ್ತಿತರರು ಇದ್ದರು.. | Kannada Prabha
Image Credit: KP
ನೆಲಮಂಗಲ: ಸಿಎಸ್ಸಿ ಕೇಂದ್ರಗಳು ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಲು ಶ್ರಮಿಸುತ್ತಿವೆ ಎಂದು ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಇ )ರಾಜ್ಯ ವ್ಯವಸ್ಥಾಪಕ ಶೈಲೇಂದರ್ ತಿಳಿಸಿದರು.
ನೆಲಮಂಗಲ: ಸಿಎಸ್ಸಿ ಕೇಂದ್ರಗಳು ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಲು ಶ್ರಮಿಸುತ್ತಿವೆ ಎಂದು ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಇ )ರಾಜ್ಯ ವ್ಯವಸ್ಥಾಪಕ ಶೈಲೇಂದರ್ ತಿಳಿಸಿದರು. ನಗರದಲ್ಲಿ ಸಿಎಸ್ ಸಿವಿಎಲ್ ಇ ಟ್ರಸ್ಟ್ ಉದ್ಘಾಟನೆ ಹಾಗೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಹಾಗೂ ಇ-ಶ್ರಮ ಯೋಜನೆಯ ಉಚಿತ ನೋಂದಣಿ ಉದ್ಘಾಟಿಸಿ ಮಾತನಾಡಿದ ಅವರು, ದೇಶಾದ್ಯಂತ ಸುಮಾರು 4 ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳಿವೆ. ಗ್ರಾಮೀಣರಿಗೆ ಸರ್ಕಾರಿ ಮತ್ತು ಉದ್ಯಮ ಸೇವೆಗಳನ್ನು ಒದಗಿಸಲು ಸಹಾಯ ಮಾಡುತ್ತವೆ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಸುಮಾರು 25ಕ್ಕೂ ಹೆಚ್ಚು ಕುಶಲಕರ್ಮಿ ಸಮುದಾಯಗಳಿಗೆ ಉಚಿತ ಕೌಶಲ್ಯ ತರಬೇತಿ ನೀಡಿ 3 ಲಕ್ಷಕ್ಕೂ ಅಧಿಕ ಸಾಲ ಸೌಲಭ್ಯ ನೀಡುತ್ತಿದೆ ಎಂದರು. ತಾಲೂಕು ಕಾರ್ಮಿಕ ನಿರೀಕ್ಷಕ ದನಪಾಲ್ ನಾಯಕ್ ಮಾತನಾಡಿ, 50ಕ್ಕೂ ಹೆಚ್ಚು ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆಯಡಿ ಇ-ಶ್ರಮ್ ಕಾರ್ಡ್ ನೀಡಲಾಗುತ್ತಿದೆ. ಕಾರ್ಮಿಕ ಇಲಾಖೆಯಿಂದ ಕಟ್ಟಡ ನಿರ್ಮಾಣ ಕಾರ್ಮಿಕರು ನೋಂದಣಿ ಮಾಡಿಕೊಂಡು ವಿವಿಧ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಸಿಎಸ್ ಸಿವಿಎಲ್ ಇ ಟ್ರಸ್ಟ್ ಅಧ್ಯಕ್ಷೆ ವೀಣಾ, ಗೌರವಾಧ್ಯಕ್ಷ ಉಮಾಶಂಕರ್, ಉಪಾಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ತ್ರಿವಿಕ್ರಂ, ಕಾರ್ಯದರ್ಶಿ ಬಿ.ಎಸ್.ರಾಘವೇಂದ್ರಚಾರ್, ಜಂಟಿ ಕಾರ್ಯದರ್ಶಿ ಬಿ.ಎನ್.ಪ್ರದೀಪ್, ಸಂಚಾಲಕ ಜಿ.ಆರ್.ಕೃಷ್ಣಮೂರ್ತಿ, ಸಹ ಸಂಚಾಲಕ ಎಸ್.ಚಂದನ್, ಸಂಘಟನಾ ಕಾರ್ಯದರ್ಶಿ ಜಿ.ಎಚ್.ರಾಜು, ಸಹ ಸಂಘಟನಾ ಕಾರ್ಯದರ್ಶಿ ಪಿ.ಮುರಳಿಕೃಷ್ಣ, ಮಾಧ್ಯಮ ವಕ್ತಾರ ಡಿ.ಆರ್.ಅಭಿಷೇಕ್, ಖಜಾಂಚಿ ಎನ್.ರಘು, ಕಾನೂನು ಸಲಹೆಗಾರ ಬಿ.ಕೆ.ಮಹೇಶ್, ಸದಸ್ಯ ವಿರೇಶ್, ಎಂ.ಚಂದನ್, ಜಿ.ಎಸ್.ಯೋಗೇಶ್, ಜಿ.ಎಂ.ಮಹೇಶ್ ಮತ್ತಿತರರು ಉಪಸ್ಥಿತರಿದರು. ಪೊಟೊ-13 ಕೆ ಎನ್ ಎಲ್ ಎಮ್ 1- ನೆಲಮಂಗಲದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಹಾಗೂ ಇ-ಶ್ರಮ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮವನ್ನು ರಾಜ್ಯ ವ್ಯವಸ್ಥಾಪಕ ಶೈಲೇಂದರ್ ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.