ಸರ್ಕಾರದ ಯೋಜನೆ ಸಮರ್ಪಕವಾಗಿ ಜನತೆಗೆ ತಲುಪಿಸಿ: ಶಾಸಕ ಜಿ.ಹಂಪಯ್ಯ

| Published : Jan 30 2024, 02:01 AM IST

ಸಾರಾಂಶ

ಸಿರವಾರದಲ್ಲಿ ಶಾಸಕ ಜಿ.ಹಂಪಯ್ಯ ನಾಯಕ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಕನ್ನಡಪ್ರಭವಾರ್ತೆ ಸಿರವಾರ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪುವಂತೆ ಹೆಚ್ಚು ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಜಿ. ಹಂಪಯ್ಯ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕರ ನೇತೃತ್ವದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅಧಿಕಾರಿಗಳು ಗ್ರಾಮೀಣ ಜನರಿಗೆ ಯೋಜನೆ ಅಗತ್ಯ ಮಾಹಿತಿ ನೀಡಬೇಕು, ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಉತ್ತೇಜನ ನೀಡುವ ಜೊತೆಗೆ ನಿಗದಿತ ಸಮಯದಲ್ಲಿ ಯೋಜನೆಗಳ ಫಲಾನುಭವಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಅಧಿಕಾರಿಗಳು ತಮ್ಮ ವ್ಯಾಪ್ತಿ ಕಾರ್ಯಗಳನ್ನು ಯಾವುದೇ ಗೊಂದಲ ಸೃಷ್ಠಿಯಾಗದಂತೆ ಎಚ್ಚರಿಕೆಯಿಂದ ಕೆಲಸಮಾಡಬೇಕು, ಯಾರಾದರೂ ಕೆಲಸದಲ್ಲಿ ನಿರುತ್ಸಾಹ ತೋರಿದರೆ ಅಗತ್ಯ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.

ತಹಸೀಲ್ದಾರ್ ರವಿ.ಎಸ್. ಅಂಗಡಿ, ಬಿಇಒ ಚಂದ್ರಶೇಖರ ದೊಡ್ಮನಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಜೆಸ್ಕಾಂ ಎಇಇ ಬೆನ್ನಪ್ಪ ಕರಿಬಂಟನಾಳ, ತಾಲೂಕು ಪಂಚಾಯತಿ ಇಒ ಶರ್ಫ್ಯುನ್ನಿಸಾ ಬೇಗಂ, ಮುಖಂಡರಾದ ಕಿರಿಲಿಂಗಪ್ಪ ಮಲ್ಲಟ, ಬ್ರಿಜೇಶ ಪಾಟೀಲ, ರಮೇಶ ದರ್ಶನಕರ್ ಸೇರಿ ಕಂದಾಯ ಇಲಾಖೆ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.