ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಗೃಹ ಬಳಕೆ ಸಿಲಿಂಡರ್ಗಳನ್ನು ಅಕ್ರಮವಾಗಿ ಆಟೋಗಳಿಗೆ ಸರಬರಾಜು ಮಾಡುತ್ತಿರುವ ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಜಿಲ್ಲಾಧ್ಯಕ್ಷ ಸಂಗಮೇಶ ದಾಶ್ಯಾಳ ಮಾತನಾಡಿ, ವಿಜಯಪುರದಲ್ಲಿ ಬಹಳ ವರ್ಷಗಳಿಂದ ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ಗಳನ್ನು ಆಟೋರಿಕ್ಷಾಗಳಿಗೆ ಸರಬರಾಜು ಮಾಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಜಿಲ್ಲಾಡಳಿತಕ್ಕೆ ಗಮನಕ್ಕೆ ತಂದರೂ ಇಲ್ಲಿಯವರೆಗೆ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.ಅಲ್ಲದೆ, ಗೃಹ ಬಳಕೆ ಸಿಲಿಂಡರ್ಗಳ ಸರಬರಾಜು ಗ್ರಾಹಕರ ಮನೆಗಳಿಗೆ ಸರಿಯಾದ ಸಮಯಕ್ಕೆ ಪೂರೈಕೆ ಆಗುತ್ತಿಲ್ಲ. ಇದರಿಂದ ಗ್ರಾಹಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ. ಈ ಅಕ್ರಮದ ಕುರಿತಾಗಿ ಆಹಾರ ಇಲಾಖೆಯು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇಂತಹ ದಂಧೆಯಲ್ಲಿ ತೊಡಗಿರುವವರ ಮೇಲೆ ಯೋಗ್ಯ ಕಾನೂನು ಕ್ರಮಕೈಗೊಳ್ಳಬೇಕು. ಅಲ್ಲದೆ, ಅಕ್ರಮ ಸಿಲಿಂಡರ್ ಸರಬರಾಜು ದಂಧೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿದರು.ಈ ಸಂದರ್ಭದಲ್ಲಿ ಪಿಂಟು ಗೊಬ್ಬೂರ, ಮುಕದ್ಸಸ್ ಇನಾಮದಾರ, ಸಿದ್ರಾಮ ಹೋಳಿ, ಆನಂದ ಹುನ್ನೂರ, ಶಿವರಾಜಗೌಡ ಪಾಟೀಲ, ಅಶೋಕ ಕೊಡಗ, ವೀರೇಶ ಪಾಟೀಲ, ಉಮೇಶ ಚಲವಾದಿ, ಸಂಗಮೇಶ ಗಾಣಗೇರ, ಮಲ್ಲು ಜಮಖಂಡಿ, ಚಿದಾನಂದ ಮಠಪತಿ, ಜಸಪೀತ್ ಸಿಂಗ್ ಗ್ಯಾನಿ, ಮೀಣಾ ಪತ್ತಾರ, ಲಕ್ಷ್ಮಿ ದಾಶ್ಯಾಳ, ಮಲ್ಲಮ್ಮ, ಕವಿತಾ ಖಿಲಾರಿ, ಮಂಜುಳಾ ಮುತ್ತಗಿಕರ, ಸುಜಾತಾ ಪೂಜಾರಿ, ಅನ್ನಪೂರ್ಣ ಕೋಳಿ, ಗಾಯತ್ರಿ ರೇಡೇಕರ, ಗಾಯತ್ರಿ ಬೆನಕನಹಳ್ಳಿ, ರಾಜಶ್ರೀ ವಾಲಿಕಾರ ಮುಂತಾದವರು ಇದ್ದರು.