ಕ್ರೈಸ್ತರ ಅವಹೇಳನ: ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಶನ್‌ನಿಂದ ದೂರು

| Published : Dec 28 2024, 01:02 AM IST

ಕ್ರೈಸ್ತರ ಅವಹೇಳನ: ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಶನ್‌ನಿಂದ ದೂರು
Share this Article
  • FB
  • TW
  • Linkdin
  • Email

ಸಾರಾಂಶ

ಯೇಸುಕ್ರಿಸ್ತರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಯೇಸುಕ್ರಿಸ್ತರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಕಿಡಿಗೇಡಿಯೊಬ್ಬ ಕ್ರಿಸ್‌ಮಸ್ ಹಬ್ಬದ ಕುರಿತು ಅಗೌರವದ ಪೋಸ್ಟ್ ಮಾಡಿರುವುದಲ್ಲದೆ ಯೇಸುಕ್ರಿಸ್ತರನ್ನು ಕೀಳಾಗಿ ಕಂಡಿದ್ದಾನೆ. ಆತನ ಹೇಳಿಕೆಗೆ ಬೆಂಬಲವಾಗಿ ಮತ್ತೊಬ್ಬ ಕಿಡಿಗೇಡಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ. ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದ್ದು, ಪೊಲೀಸರು ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕ್ರಿಶ್ಚಿಯನ್ ಅಸೋಸಿಯೇಷನ್ ಪ್ರಮುಖರು ಒತ್ತಾಯಿಸಿದರು.ಯೇಸುಕ್ರಿಸ್ತರನ್ನು ಅವಹೇಳನ ಮಾಡಿ ಕ್ರೈಸ್ತ ಸಮುದಾಯದ ಭಾವನೆಗೆ ದಕ್ಕೆ ತಂದಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.ದೂರು ನೀಡುವ ಸಂದರ್ಭ ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು, ಕಾರ್ಯದರ್ಶಿ ಸಿ.ಜೆ.ಆಂಟೋ, ಖಜಾಂಚಿ ಬೇಬಿ ಜಾರ್ಜ್, ನಿರ್ದೇಶಕರಾದ ಅಂತೋಣಿ ರಾಬಿನ್, ವರ್ಗೀಸ್ ಪಿ.ಒ., ದಾದು ಜೋಸೆಫ್, ಥಾಮಸ್ ಮನ್ನಾರತ್ ಮತ್ತಿತರರು ಹಾಜರಿದ್ದರು.