ಜನರ ಆರೋಗ್ಯಕ್ಕಾಗಿ ಇಲಾಖೆ ಸಿಬ್ಬಂದಿ ಕೈಜೋಡಿಸಿ

| Published : Aug 09 2024, 12:49 AM IST

ಸಾರಾಂಶ

ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಉದ್ಭವಿಸುತ್ತಿದ್ದು, ಪ್ರತಿ ರೋಗಿಯನ್ನು ಆರೈಕೆ ಮಾಡಿ ಮತ್ತು ಔಷಧೋಪಚಾರ ಮಾಡುವ ಮೂಲಕ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೈಜೊಡಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಉದ್ಭವಿಸುತ್ತಿದ್ದು, ಪ್ರತಿ ರೋಗಿಯನ್ನು ಆರೈಕೆ ಮಾಡಿ ಮತ್ತು ಔಷಧೋಪಚಾರ ಮಾಡುವ ಮೂಲಕ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೈಜೊಡಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.

ತಾಲೂಕಿನ ಉಡಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಪ್ರಮಾಣದಲ್ಲಿ ಜನಸಾಮಾನ್ಯರು ಬಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಬಾಣಂತಿ ಮಹಿಳೆಯರೊಂದಿಗೆ ಚರ್ಚಿಸಿ ಆಸ್ಪತ್ರೆ ಸೌಲಭ್ಯಗಳು ಚೆನ್ನಾಗಿ ಸಿಗುತ್ತಿವೆಯೇ ಎಂದು ವಿಚಾರಿಸಿದರು.ಆಸ್ಪತ್ರೆಯ ಎಲ್ಲ ಕೊಠಡಿಗಳನ್ನು ಪರಿಶೀಲನೆ ಮಾಡಿದರು. ಔಷಧಿ ಕೊಠಡಿ ನಿರ್ವಹಣೆ, ವಿತರಣೆ ಕುರಿತು ಮಾಹಿತಿ ಪಡೆದರು. ಕೆಂಗಾನೂರ ಗ್ರಾಪಂಗೆ ಭೇಟಿ ನೀಡಿ ಡಿಜಿಟಲ್ ಗ್ರಂಥಾಲಯ ವೀಕ್ಷಣೆ ಮಾಡಿ ಕಂಪ್ಯೂಟರ್ ಕೇಂದ್ರಗಳನ್ನು ಪರಿಶೀಲನೆ ಮಾಡಿದರು. ಗ್ರಾಮೀಣ ಮಕ್ಕಳು ಹಾಗೂ ಯುವಕರು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಙಾನ, ಉಪಯೋಗ ಬಹಳಷ್ಟಿದೆ ಎಂದರು. ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾಂವಿ, ಆರೋಗ್ಯಾಧಿಕಾರಿ ಡಾ.ಸಂಜಯ ಸಿದ್ದಣ್ಣವರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೀರಣ ಘೋರ್ಪಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್. ಪ್ಯಾಟಿ, ಸಹಾಯಕ ನಿರ್ದೇಶಕರಾದ ವಿಜಯ ಪಾಟೀಲ, ರಘು ಬಿ.ಎನ್., ಪ್ರಕಾಶ ಮೇಳವಂಕಿ, ಪಿಡಿಒ ಮೇಘನಾ ಶೇಟ್ಟಿ, ಗ್ರಾಪಂ ಅಧ್ಯಕ್ಷ ಯಲ್ಲಪ್ಪ ಹುಲಗಣ್ಣವರ, ತಾಪಂ ಐಇಸಿ ಸಂಯೋಜಕ ಎಸ್.ವಿ. ಹಿರೇಮಠ ಮತ್ತು ಆರೋಗ್ಯ ಇಲಾಖೆ, ಗ್ರಾಪಂ ಸಿಬ್ಬಂದಿ ಇದ್ದರು.